ದೇಶಕ್ಕೆ ಬೆಂಕಿ ಹಚ್ಚಲು ನೋಡಿದ್ರೆ, ಕಾಂಗ್ರೆಸ್‌ ಭಸ್ಮವಾಗಿ ಹೋಗುತ್ತೆ-ಈಶ್ವರಪ್ಪ

ಹೊಸದಿಗಂತ ವರದಿ ಶಿವಮೊಗ್ಗ:

ಅಗ್ನಿಪಥ ಯೋಜನೆ ವಿರೋಧಿಸಿ ದೇಶದ ಆಸ್ತಿ ಭಸ್ಮ ಮಾಡಲು ಯುವಕರಿಗೆ ಪ್ರಚೋದಿಸಿದರೆ ಕಾಂಗ್ರೆಸ್ ಕೂಡ ಸಂಪೂರ್ಣ ಭಸ್ಮವಾಗಿ ಹೋಗಲಿದೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿ, ಪ್ರಜಾತಂತ್ರ ವ್ಯವಸ್ಥೆಯಲ್ಲಿ ಯಾವುದೇ ವಿರೋಧ ವ್ಯಕ್ತ ಮಾಡಲು ಎಲ್ಲರಿಗೂ ಅವಕಾಶ ಇದೆ. ಆದರೆ ವಿರೋಧಕ್ಕೆ ಅರ್ಥ ಇರಬೇಕು. ಅಗ್ನಿಪಥ ಯೋಜನೆಯಲ್ಲಿ ದೋಷ ಇದ್ದರೆ ಪ್ರತಿಭಟನೆ ಮಾಡಲು ಯಾರದೂ ಅಡ್ಡಿ ಇಲ್ಲ. ಆದರೆ ವಿರೋಧದ ದೇಶದ ಆಸ್ತಿಗೆ ಬೆಂಕಿ ಹಚ್ಚಲಾಗುತ್ತಿದೆ. ಅಧಿಕಾರದ ಲಾಲಸೆಗೆ ಕಾಂಗ್ರೆಸ್ ಯುವಕರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಇದಕ್ಕಾಗಿ ಕಾಂಗ್ರೆಸ್ ದೇಶದ ಜನರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

ದೇಶದ ಆಸ್ತಿ ಯಾವುದೇ ಪಕ್ಷ ಅಥವಾ ವ್ಯಕ್ತಿಗೆ ಸೇರಿದ್ದಲ್ಲ. ಹಿಂದೆ ಮಹಾತ್ಮ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಸೇರಿದಂತೆ ಅನೇಕರು ಶಾಂತಿಯುತವಾಗಿ ಹೋರಾಟ ಮಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ಈಗ ಅದೇ ಕಾಂಗ್ರೆಸ್ ಪಕ್ಷದಲ್ಲಿ ಗೂಂಡಾಗಳು ಸೇರಿಕೊಂಡಿದ್ದಾರೆ. ದೇಶಕ್ಕೆ ಬೆಂಕಿ ಹಚ್ಚಲು ಪ್ರಚೋದನೆ ನೀಡುತ್ತಿದ್ದಾರೆ. ಇದೇನಾ ಇವರಿಗೆ ದೇಶದ ಬಗ್ಗೆ ಇರುವ ಕಾಳಜಿ ಎಂದು ಪ್ರಶ್ನಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!