ಕೆಟ್ಟ ಸಂಸ್ಕೃತಿ ರಾಜಕಾರಣಕ್ಕೆ ಕಾಂಗ್ರೆಸ್‌ ಮೂಲಕಾರಣ: ಸಿಎಂ ಬೊಮ್ಮಾಯಿ

ಹೊಸದಿಗಂತ ವರದಿ ಹುಬ್ಬಳ್ಳಿ:

ಕೆಟ್ಟ ಸಂಸ್ಕೃತಿ ರಾಜಕಾರಣ ಬರಲು ಕಾಂಗ್ರೆಸ್ ಮಹಾದ್ವಾರವೇ ಮೂಲ ಕಾರಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.

ಗುರುವಾರ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಸ್ಯಾಂಟ್ರೋ ರವಿಯಂಥ ರೌಡಿ ಬಿಜೆಪಿಯಲ್ಲಿ ಇರಲು ಮಾತ್ರ ಸಾಧ್ಯ ಎಂದು ಕಾಂಗ್ರೆಸ್ ಮುಖಂಡ ದಿನೇಶ ಗುಂಡೂರಾವ್ ಮಾಡಿರುವ ಟ್ವೀಟ್ ಗೆ  ಪ್ರತಿಕ್ರಿಯಿಸಿದರು.

ಕಾಂಗ್ರೆಸ್ ರಾಜಕೀಯ ದಿವಾಳಿತನಕ್ಕೆ ತಲುಪಿದೆ. ಅಲ್ಲಿ ಎಂತೆಂಥವರು ಇದ್ದಾರೆ ಎನ್ನುವುದು ದಿನೇಶ ಗುಂಡೂರಾವ್ ಅವರಿಗೆ ತಿಳಿದಿದೆ. ಅವರಂಥ ಕೀಳು ಮಟ್ಟಕ್ಕೆ ನಾನು ಹೋಗುವುದಿಲ್ಲ. ಮೊದಲು ಅವರ ಮನೆ ಸ್ವಚ್ಛಮಾಡಿಕೊಳ್ಳುವುದನ್ನು ಕಲಿಯಲಿ. ಸ್ಯಾಂಟ್ರೋ ರವಿ ಬಿಜೆಪಿ ಕಾರ್ಯಕರ್ತ ಹೌದೋ ಅಲ್ಲವೋ ಎಂದು ಪರಿಶೀಲನೆ ಮಾಡಲು ಹೇಳುತ್ತೇನೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!