ಗಲಭೆಯಲ್ಲಿ ಕಾಂಗ್ರೆಸ್ ಕೈವಾಡ: ರೇಣುಕಾಚಾರ್ಯ ಆರೋಪ

ಹೊಸದಿಗಂತ ವರದಿ ವಿಜಯನಗರ:

ಹಳೆ ಹುಬ್ಬಳ್ಳಿ ಗಲಭೆಯಲ್ಲಿ ಕಾಂಗ್ರೆಸ್ ಕೈವಾಡ ಇದೆ ಎಂದು ಶಾಸಕ ರೇಣುಕಾಚಾರ್ಯ ಗಂಭೀರ ಆರೋಪ ಮಾಡಿದರು. ಹೊಸಪೇಟೆಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಎಸ್ವೈ ಸಿಎಂ ಆಗಿದ್ದಾಗ ಯಾವ ಸಮಾಜಕ್ಕೂ ತಾರತಮ್ಯ ಮಾಡದೇ ಸಮಾನವಾಗಿ ನೋಡಿದರು. ಆಗ ಯಾವುದೇ ಹಿಂದೂ- ಮುಸ್ಲಿಂ ಗಲಾಟೆ ಆಗಿರಲಿಲ್ಲ. ಕಾಂಗ್ರೆಸ್ ಟಿಪ್ಪು ಜಯಂತಿ ಆಚರಣೆ ಮಾಡುವ ಮೂಲಕ ಹಿಂದೂ-ಮುಸ್ಲಿಂ ಗಲಾಟೆ ಆರಂಭವಾಗಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!