ಹೊಸದಿಗಂತ ವರದಿ, ಹುಬ್ಬಳ್ಳಿ:
ಇತಿಹಾಸ ನೋಡಿದರೆ ರೌಡಿಗಳಿಗೆ ಅವಕಾಶ ನೀಡಿರುವ ಪಕ್ಷ ಯಾವುದಾದರೂ ಇದ್ದರೆ ಅದು ಕಾಂಗ್ರೆಸ್ ಮಾತ್ರ. ರೌಡಿಗಳಿಗೆ ಪ್ರೋತ್ಸಾಹ ನೀಡುತ್ತಿದ್ದು, ಬಹುತೇಕರು ಆ ಪಕ್ಷದಲ್ಲಿ ಅವರೆ ಇದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.
ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉದಾಹಣೆಗೆ ಕಾಂಗ್ರೆಸ್ ಯುವ ಮೋರ್ಚಾ ಅಧ್ಯಕ್ಷ ಅಂತಹ ಕೆಲಸ ಮಾಡಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.
ರೌಡಿಗಳನ್ನು ದೂರ ಇಟ್ಟಿರುವ ಪಕ್ಷ ಯಾವುದಾದರೂ ಇದ್ದರೆ ಅದು ಬಿಜೆಪಿ ಮಾತ್ರ. ಪಕ್ಷದಲ್ಲಿ ಯಾವತ್ತು ಅಂತವರಿಗೆ ಅವಕಾಶವಿಲ್ಲ. ಒಂದೆರೆಡು ತಿಳಿಯದೆ ಸ್ಥಳೀಯವಾಗಿ ರೌಡಿಗಳಿಗೆ ನೀಡಿರುವ ಅವಕಾಶ ದೊಡ್ಡ ಪ್ರಮಾಣದಲ್ಲಿ ಬಿಂಬಿಸುವ ಅವಶ್ಯಕತೆ ಇಲ್ಲ. ಅಂತಹ ಪ್ರಕರಣ ಗಮನಕ್ಕೆ ಬಂದರೆ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲು ಅವರು ನೋಡಿಕೊಳ್ಳುತ್ತಾರೆ ಎಂದು ಸ್ಪಷ್ಟಪಡಿಸಿದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ