ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ರಾಜ್ಯ ಪ್ರವಾಸ ಕೈಗೊಂಡಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ಕಾಫಿನಾಡು ಖ್ಯಾತಿಯ ಚಿಕ್ಕಮಗಳೂರಿಗೆ ಭೇಟಿ ನೀಡುತ್ತಿದ್ದಾರೆ.
ಪ್ರಿಯಾಂಕಾ ಗಾಂಧಿ ಇಂದು ಪಂಚಪೀಠಗಳಲ್ಲಿ ಒಂದಾದ ರಂಭಾಪುರಿ ಮಠ ಮತ್ತು ಶೃಂಗೇರಿ ಮಠಕ್ಕೆ ಭೇಟಿ ನೀಡಲಿದ್ದಾರೆ. ನಂತರ ಜಿಲ್ಲೆಯ ಎನ್ಆರ್ಪುರ ತಾಲೂಕಿನ ಬಾಳೆಹೊನ್ನೂರು ಪಟ್ಟಣದಲ್ಲಿ ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಟಿ ಡಿ ರಾಜೇಗೌಡ ಪರ ಪ್ರಚಾರ ಮಾಡಲಿದ್ದಾರೆ.
ಬಳಿಕ ಮಧ್ಯಾಹ್ನ 2 ಗಂಟೆಗೆ ಹನೂರಿನ ಜಿ.ವಿ. ಗೌಡ ಪ್ರಥಮ ದರ್ಜೆ ಕಾಲೇಜು ಸಮೀಪದ ಆವರಣದಲ್ಲಿ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ರಣದೀಪ್ ಸಿಂಗ್ ಸುರ್ಜೇವಾಲ ಪಾಲ್ಗೊಳ್ಳಲಿದ್ದಾರೆ.