ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ (Congress) ನಾಯಕ ಸಾಧು ಸಿಂಗ್ ಧರಮ್ಸೋತ್ (sadhu Singh Dharamsot) ಅವರನ್ನು ಸೋಮವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಧರಮ್ಸೋತ್ ಅವರನ್ನು ಬಂಧಿಸಲಾಗಿದೆ ಎಂದು ಇಡಿ ಅಧಿಕಾರಿಗಳು ಹೇಳಿದ್ದಾರೆ.
ಈ ಹಿಂದೆ ಪಂಜಾಬ್ ವಿಜಿಲೆನ್ಸ್ ಬ್ಯೂರೋ ಅವರನ್ನು ಎರಡು ಬಾರಿ ಬಂಧಿಸಿತ್ತು. ಅರಣ್ಯ ಹಗರಣದಲ್ಲಿ ಮೊದಲು ವಿಜಿಲೆನ್ಸ್ನಿಂದ ಬಂಧಿಸಲ್ಪಟ್ಟು ಜೈಲಿನಲ್ಲಿಯೇ ಇದ್ದರು. ಆ ಬಳಿಕ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಮತ್ತೆ ಬಂಧಿತರಾಗಿದ್ದರು.
64 ವರ್ಷದ ರಾಜಕಾರಣಿಯನ್ನು ಇಡಿ, ಜಲಂಧರ್ನಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್ಎ) ನಿಬಂಧನೆಗಳ ಅಡಿಯಲ್ಲಿ ಕಸ್ಟಡಿಗೆ ತೆಗೆದುಕೊಂಡಿತು. ಕಳೆದ ವರ್ಷ ನವೆಂಬರ್ನಲ್ಲಿ ರಾಜ್ಯದ ಮತ್ತೊಬ್ಬ ಅರಣ್ಯ ಸಚಿವ ಸಂಗತ್ ಸಿಂಗ್ ಗಿಲ್ಜಿಯಾನ್, ಕೆಲವು ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಇತರರ ಮೇಲೆ ಇಡಿ ದಾಳಿ ನಡೆಸಿತ್ತು.
ಧರಮ್ಸೋತ್ ಅವರು ಐದು ಬಾರಿ ಶಾಸಕರಾಗಿದ್ದಾರೆ ಮತ್ತು ಕಳೆದ ವರ್ಷ ಪಂಜಾಬ್ ವಿಜಿಲೆನ್ಸ್ ಬ್ಯೂರೋ ಅವರು ಅಕ್ರಮ ಆಸ್ತಿ ಹೊಂದಿರುವ ಆರೋಪದ ಪ್ರಕರಣದಲ್ಲಿ ಬಂಧಿಸಿದ್ದರು.