ಹೊಸದಿಗಂತ ವರದಿ ವಿಜಯನಗರ:
ನಿರ್ಗಮಿತ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಬಂಧಿಸುವಂತೆ ಆಗ್ರಹಿಸಿ ಮಾಜಿ ಸಚಿವ ಎಚ್.ಕೆ.ಪಾಟೀಲ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆಗೆ ಮುತ್ತಿಗೆ ಹಾಕಲು ಮುಂದಾದರು. ಈ ವೇಳೆ ಪ್ರತಿಭಟನಾಕಾರನ್ನು ಪೊಲೀಸರು ವಶಕ್ಕೆ ಪಡೆದರು.
ಶನಿವಾರ ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆಗೆ ಮುತ್ತಿಗೆ ಹಾಕುವ ಉದ್ದೇಶದಿಂದ ಪ್ರತಿಭಟನಾಕಾರರು ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿ ಯಿಂದ ರ್ಯಾಲಿ ಆರಂಭಿಸಿದರು. ಕಾಂಗ್ರೆಸ್ ಕಾರ್ಯಕರ್ತರನ್ನು ಹೊಸಪೇಟೆಯ ಕನಕದಾಸ ವೃತ್ತದಲ್ಲಿ ಪೊಲೀಸರು ತಡೆದರು.
ಕಪ್ಪು ಬಾವುಟ ಹಿಡಿದು ನಿರ್ಗಮಿತ ಸಚಿವ ಕೆ.ಎಸ್.ಈಶ್ವರಪ್ಪ ರನ್ನು ಬಂಧಿಸಬೇಕು. ಸಂತೋಷ್ ಸಾವಿನ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.