ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಪೋಸ್ಟರ್ “ಪಾಲಿಟಿಕ್ಸ್” ಪ್ರತಿಭಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬರ ಪರಿಹಾರ ವಿಳಂಬ ಖಂಡಿಸಿ ಕಾಂಗ್ರೆಸ್ ಮುಖಂಡರು ವಿಧಾನಸೌಧ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲ, ಸಚಿವರಾದ ರಾಮಲಿಂಗ ರೆಡ್ಡಿ, ಕೆ.ಜೆ.ಜಾರ್ಜ್ ಹಾಗೂ ಕೃಷ್ಣ ಬೈರೇಗೌಡ ಅವರು ಕೇಂದ್ರ ಸರ್ಕಾರದ ವಿರುದ್ಧ ಭಿತ್ತಿಪತ್ರಗಳನ್ನು ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ.

ಬೇಡ ಬೇಡ ಖಾಲಿ ಚೊಂಬು ಬೇಡ. ಚೋಂಬೇಶ್ವರನಿಗೆ ಚೊಂಬು ಕೊಟ್ಟ ಮೋದಿಗೆ ಧಿಕ್ಕಾರ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕದ ಬಗ್ಗೆ ಕೇಂದ್ರದ ನಿರ್ಲಕ್ಷ್ಯ ಧೋರಣೆ ಖಂಡಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಿದ್ದೇವೆ. ಮೋದಿ ಮತ್ತು ಅಮಿತ್ ಶಾ ಕರ್ನಾಟಕದ ರೈತರನ್ನು ದ್ವೇಷಿಸುತ್ತಾರೆ. ಕರ್ನಾಟಕದ 220 ತಾಲೂಕಿನಲ್ಲಿ ಬರ ಇದೆ. ನಾವು ಗ್ಯಾರಂಟಿ ಯೋಜನೆಗೆ ದುಡ್ಡು ಕೇಳುತ್ತಿಲ್ಲ. ಬರದ ಪರಿಹಾರವನ್ನು ಕೇಳುತ್ತಿದ್ದೇವೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!