ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋಲಾರ ಜಿಲ್ಲೆಯಲ್ಲಿ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ರಾಹುಲ್ ಗಾಂಧಿ ಎಡವಟ್ಟು ಮಾಡಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ‘ಚೀಫ್ ಮಿನಿಸ್ಟರ್ ಡಿ.ಕೆ ಶಿವಕುಮಾರ್’ ಎಂಬುದಾಗಿ ಸಂಭೋಧಿಸಿದ ಘಟನೆ ನಡೆದಿದೆ.
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಚೊಕ್ಕಂಡಹಳ್ಳಿ ಬಳಿಯಲ್ಲಿ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಬೃಹತ್ ಪ್ರಚಾರ ಸಮಾವೇಶ ಆಯೋಜಿಸಲಾಗಿತ್ತು. ಈ ಸಮಾವೇಶದಲ್ಲಿ ಭಾಗಿಯಾಗಿದ್ದ ರಾಹುಲ್ ಗಾಂಧಿ ಅವರು, ನೆರೆದಿದ್ದ ಕಾರ್ಯಕರ್ತರು, ಜನತೆಯನ್ನು ಉದ್ದೇಶಿಸಿ ಭಾಷಣ ಮಾಡಿದರು.
ಈ ವೇಳೆ ರಾಹುಲ್ ಗಾಂಧಿಯವರು ಡಿಸಿಎಂ ಡಿಕೆ ಶಿವಕುಮಾರ್ ಎಂಬುದಾಗಿ ಹೇಳೋ ಬದರು, ಚೀಫ್ ಮಿನಿಸ್ಟರ್ ಡಿ.ಕೆ ಶಿವಕುಮಾರ್ ಎಂಬುದಾಗಿ ಸಂಭೋದಿಸಿ ಎಡವಟ್ಟು ಮಾಡಿದರು. ಇದನ್ನ ಗಮನಿಸಿದ ಕಾಂಗ್ರೆಸ್ ನಾಯಕರು, ಅವರಿಗೆ ಮನವರಿಕೆ ಮಾಡಿ ಕೊಟ್ಟಾಗ ಮತ್ತೆ ತಮ್ಮ ತಪ್ಪನ್ನು ತಿದ್ದುಕೊಂಡು, ಡಿಸಿಎಂ ಡಿ.ಕೆ ಶಿವಕುಮಾರ್ ಎಂಬುದಾಗಿ ಹೇಳಿ ತಪ್ಪು ಸರಿಪಡಿಸಿದ ಘಟನೆ ನಡೆದಿದೆ.