ಕಾಂಗ್ರೆಸ್‌ ಪ್ರಣಾಳಿಕೆ ಭಾರತಕ್ಕಿಂತ ಪಾಕಿಸ್ತಾನದ ಚುನಾವಣೆಗೆ ಸೂಕ್ತ: ಅಸ್ಸಾಂ ಸಿಎಂ ಹಿಮಂತ್ ಶರ್ಮಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಾಕಿಸ್ತಾನದ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಹೆಚ್ಚು ಸೂಕ್ತವಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಟೀಕಿಸಿದ್ದಾರೆ.

ಜೋರ್ಹತ್ ಕ್ಷೇತ್ರದಲ್ಲಿ ಚುನಾವಣಾ ರ್ಯಾಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪ್ರಣಾಳಿಕೆ ಕುರಿತು ಪ್ರತಿಕ್ರಿಯಿಸಿದರು. ಭಾರತಕ್ಕಿಂತ ಪಾಕಿಸ್ತಾನದಲ್ಲಿ ನಡೆಯುವ ಚುನಾವಣೆಗೆ ಇದು ಹೆಚ್ಚು ಸೂಕ್ತವಾಗಿದೆ ಎಂದು ಹೇಳಿದರು. ಅಧಿಕಾರಕ್ಕಾಗಿ ಸಮಾಜವನ್ನು ಒಡೆಯುವ ಗುರಿಯನ್ನು ಈ ಪ್ರಣಾಳಿಕೆ ಹೊಂದಿದೆ.

ಇದು ತುಷ್ಟೀಕರಣದ ನೀತಿಯಾಗಿದೆ ಮತ್ತು ನಾವು ಇದನ್ನು ಖಂಡಿಸುತ್ತೇವೆ. ಪ್ರಣಾಳಿಕೆಯು ಭಾರತದಲ್ಲಿ ಚುನಾವಣೆಗಾಗಿ ಅಲ್ಲ ಪಾಕಿಸ್ತಾನಕ್ಕೆ ಎಂದು ಭಾಸವಾಗುತ್ತಿದೆ ಎಂದಿದ್ದಾರೆ.

ಯಾವುದೇ ಹಿಂದೂ ಅಥವಾ ಮುಸ್ಲಿಂ ತ್ರಿವಳಿ ತಲಾಖ್, ಬಹುಪತ್ನಿತ್ವ ಮತ್ತು ಬಾಲ್ಯ ವಿವಾಹವನ್ನು ಬೆಂಬಲಿಸುವುದಿಲ್ಲ. ಸಮಾಜವನ್ನು ಒಡೆದು ಅಧಿಕಾರ ಹಿಡಿಯುವುದು ಕಾಂಗ್ರೆಸ್‌ನ ಮನಸ್ಥಿತಿಯಾಗಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!