ಹೊಸದಿಗಂತ ಡಿಜಿಟಲ್ ಡೆಸ್ಕ್:
ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದ್ದು, ರಾಜ್ಯದಲ್ಲಿ ಚುನಾವಣಾ ರಣಗು ಕಾವೇರಿದೆ. ಅದರಲ್ಲೂ ಚನ್ನಪಟ್ಟಣದಲ್ಲಿ ರಣಕಣದಲ್ಲಿ ಭಾರೀ ಫೈಟ್ ಎದುರಾಗಲಿದೆ, ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಇಲ್ಲಿ ಕಣಕ್ಕಿಳಿಯಲಿದ್ದು, ಇವರ ವಿರುದ್ಧ ಸೆಣೆಸಾಡಲು ಚಿತ್ರನಟಿ ರಮ್ಯಾ ಅವರನ್ನು ಕಣಕ್ಕಿಳಿಸುವ ಪ್ಲ್ಯಾನ್ ಕಾಂಗ್ರೆಸ್ನದ್ದು.
ಡಿ.ಕೆ. ಸುರೇಶ್ ಅಥವಾ ರಮ್ಯಾರನ್ನು ಕಣಕ್ಕೆ ಇಳಿಸಲು ತಯಾರಿ ನಡೆಯುತ್ತಿದ್ದು, ಚುನಾವಣಾ ಕಣ ಮತ್ತಷ್ಟು ರಂಗೇರಿದೆ. ಮೂರೂ ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿವೆ. ಈ ಮಧ್ಯೆ ಕಾಂಗ್ರೆಸ್ ಗೆಲುವಿನ ಸೂತ್ರ ಹಿಡಿದಿದ್ದು, ರಮ್ಯಾರನ್ನು ಕಣಕ್ಕಿಳಿಸುವ ಎಲ್ಲ ತಯಾರಿ ಮಾಡಿದ್ದಾರೆ.
ಡಿಕೆ ಸುರೇಶ್ ಮಾತ್ರ ಈ ಬಗ್ಗೆ ನನಗೆ ಗೊತ್ತಿಲ್ಲ, ನಾನು ಲೋಕಸಭಾ ಸದಸ್ಯ ಎಲ್ಲೆಡೆ ಆಹ್ವಾನ ಇದೆ ಆದರೆ ನನಗೆ ಆಸಕ್ತಿ ಇಲ್ಲ ಎಂದಿದ್ದಾರೆ.