ಕಾಂಗ್ರೆಸ್‌ ಎಂದರೆ ಭ್ರಷ್ಟಾಚಾರ, ದುರಾಡಳಿತ: ಹರಿಯಾಣದಲ್ಲಿ ಜೆ.ಪಿ ನಡ್ಡಾ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್‌ ಎಂದರೆ ಭ್ರಷ್ಟಾಚಾರ, ದುರಾಡಳಿತ, ಅಪರಾಧೀಕರಣ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಭಾನುವಾರ ವಾಗ್ದಾಳಿ ನಡೆಸಿದ್ದಾರೆ.

ಹರಿಯಾಣ ವಿಧಾನಸಭೆ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ನಾಯಕರು ಕೇವಲ ಹಗರಣಗಲ್ಲಿ ತೊಡಗಿದ್ದಾರೆ. ರೈತರ ಭೂಮಿಗಳನ್ನೂ ಕಬಳಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್‌ ಯಾವ ಹಗರಣದಲ್ಲಿ ಭಾಗಿಯಾಗಿಲ್ಲ?, ಕಲ್ಲಿದ್ದಲು ಹಗರಣ, ಜಲಾಂತರ್ಗಾಮಿ ಹಗರಣ, ಅಕ್ಕಿ ಹಗರಣ, ಟ್ಯಾಂಕ್ ಹಗರಣ, ಹೆಲಿಕಾಪ್ಟರ್ ಹಗರಣ, 2-ಜಿ ಹಗರಣ ಸೇರಿದಂತೆ ಪ್ರತಿಯೊಂದು ಹಗರಣದಲ್ಲೂ ಭಾಗಿಯಾಗುವ ಮೂಲಕ ಭ್ರಷ್ಟಾಚಾರದಲ್ಲೇ ತೊಡಗಿದೆ ಎಂದು ವ್ಯಂಗ್ಯವಾಡಿದ್ದಾರೆ.

ಸರ್ಕಾರಿ ಉದ್ಯೋಗಗಳಲ್ಲಿ ‘ಖರ್ಚಿ-ಪರ್ಚಿ’ (ಲಂಚ ಮತ್ತು ಒಲವು) ಮೂಲಕ ಉದ್ಯೋಗದಲ್ಲೂ ಭ್ರಷ್ಟಾಚಾರ ನಡೆದಿದೆ. ಆದರೆ ಭವಿಷ್ಯದ ಭರವಸೆ ಹೊಂದಿರುವ ಯುವಕರು ಸರದಿ ಸಾಲಿನಲ್ಲಿಯೇ ನಿಂತಿದ್ದಾರೆ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ಎಂದರೆ ಭ್ರಷ್ಟಾಚಾರ, ದುರಾಡಳಿತ, ಅಪರಾಧೀಕರಣ, ವೋಟ್‌ ಬ್ಯಾಂಕ್ ರಾಜಕಾರಣ ಎಂದಿರುವ ನಡ್ಡಾ, ಮತ್ತೆ ನಿಮಗೆ ಆ ದಿನಗಳು ಬೇಕೆ ಎಂದು ಪ್ರಶ್ನಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಭಾರತ ವಿಶ್ವದ ಆರ್ಥಿಕತೆಯಲ್ಲಿ 11ನೇ ಸ್ಥಾನದಿಂದ ಐದನೇ ಸ್ಥಾನಕ್ಕೆ ಏರಿಕೆ ಕಂಡಿತ್ತು. ಮುಂಬರುವ ಕಾಲಘಟ್ಟದಲ್ಲಿ ಭಾರತವು ವಿಶ್ವದ ಮೂರನೇ ಆರ್ಥಿಕ ಶಕ್ತಿಯಾಗಲಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!