ಅಭಿವೃದ್ಧಿ ಬಗ್ಗೆ ಪ್ರಶ್ನಿಸಿದ್ದಕ್ಕೆ ʻಕೈʼ ನಾಯಕನ ಗೂಂಡಾವರ್ತನೆ: ಯುವಕನ ಕೆನ್ನೆಗೆ ಬಾರಿಸಿದ ವಿಡಿಯೋ ವೈರಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ಕರ್ನಾಟಕ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಶಾಸಕ ಎಂ.ಬಿ ಪಾಟೀಲ್ ತಾಳ್ಮೆ ಕಳೆದುಕೊಂಡು ಯುವಕನೊಬ್ಬನ ಮೇಲೆ ಕೈ ಮಾಡಿರುವ ವಿಡಿಯೋವನ್ನು ರಾಜ್ಯ ಬಿಜೆಪಿ ಟ್ವೀಟ್‌ ಮಾಡಿದೆ.

ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ.ಬಿ.ಪಾಟೀಲ್ ಚುನಾವಣಾ ಪ್ರಚಾರದ ಭಾಗವಾಗಿ ಗ್ರಾಮವೊಂದಕ್ಕೆ ತೆರಳಿದ್ದರು. ಅಲ್ಲಿದ್ದ ಸ್ಥಳೀಯರ ಜತೆ ಮಾತುಕತೆ ನಡೆಸಿದರು. ಇದೇ ವೇಳೆ ಸ್ಥಳೀಯ ಯುವಕರು ತಮ್ಮ ಗ್ರಾಮಕ್ಕೆ ಮಾಡಿದ್ದೇನು? ಎಂದು ಪ್ರಶ್ನಿಸಿದ ಕೂಡಲೇ ಇಬ್ಬರ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ಶಾಸಕ ಸಿಟ್ಟಿನಿಂದ ತಾಳ್ಮೆ ಕಳೆದುಕೊಂಡು ಯುವಕನ ಮೇಲೆ ಕೈ ಮಾಡಿದ್ದಾರೆ.

ಈ ವೀಡಿಯೋವನ್ನು ಆಧರಿಸಿ ತಮ್ಮ ಸಮಸ್ಯೆಗಳನ್ನು ಹಂಚಿಕೊಳ್ಳಲು ಬಂದವರ ಮೇಲೆ ಕಾಂಗ್ರೆಸ್ ಶಾಸಕ ಹಲ್ಲೆ ನಡೆಸಿದ್ದಾರೆ ಎಂದು ಬಿಜೆಪಿ ಟೀಕಿಸಿದೆ. ಇದು ಕಾಂಗ್ರೆಸ್‌ನ ನಿಜವಾದ ರೂಪ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಗ್ರಾಮದ ಅಭಿವೃದ್ಧಿ ಬಗ್ಗೆ ದೂರು ನೀಡಿದ ಗ್ರಾಮಸ್ಥರ ವಿರುದ್ಧ ಶಾಸಕ ಪಾಟೀಲ್ ಕ್ರಮ ಕೋಲಾಹಲಕ್ಕೆ ಕಾರಣವಾಯಿತು. ಶಾಸಕರ ವರ್ತನೆ ಸರಿಯಿಲ್ಲ ಎಂದು ಟೀಕೆಗಳ ಸುರಿಮಳೆಯಾಗುತ್ತಿದೆ. ಈ ವಿವಾದಕ್ಕೆ ಶಾಸಕ ಪಾಟೀಲ್ ಪ್ರತಿಕ್ರಿಯಿಸಿದ್ದು, ಯುವಕ ಅಸಂಸದೀಯ ಬಳಸಿದ್ದು, ಹೀಗಾಗಿ ಆತನ ಮೇಲೆ ಕೈ ಮಾಡಬೇಕಾಯಿತು ಎಂದು ವಿವರಣೆ ಕೊಟ್ಟಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!