ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಸಭಾ ಚುನಾವಣಾ ಫಲಿತಾಂಶದ ನಂತರ ಹಿಮಾಚಲ ಪ್ರದೇಶದ ಕಾಂಗ್ರೆಸ್ ಸಚಿವ ವಿಕ್ರಮಾದಿತ್ಯ ಸಿಂಗ್ ಅವರು ಇಂದು ಬೆಳಗ್ಗೆ ಸಚಿವ ಸಂಪುಟ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸುಖವಿಂದರ್ ಸಿಂಗ್ ಸುಖು ಸರ್ಕಾರ ವಿರುದ್ಧ ಆರೋಪಿಸಿರುವ ವಿಕ್ರಮಾದಿತ್ಯ ಸಿಂಗ್, ತನ್ನ ಸ್ವಂತ ಪಕ್ಷದ ಶಾಸಕರನ್ನು ಹಲವಾರು ಬಾರಿ ಅವಮಾನಿಸಿದೆ ಎಂದು ಆರೋಪಿಸಿದ್ದಾರೆ. ಈ ಅವಮಾನವನ್ನು ಸಹಿಸಲು ಸಾಧ್ಯವಿಲ್ಲ ಮತ್ತು ಹಿಮಾಚಲದಲ್ಲಿ ಕಾಂಗ್ರೆಸ್ ಮುಂದಿನ ಹೆಜ್ಜೆಯ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧರಿಸಬೇಕು ಎಂದು ವಿಕ್ರಮಾದಿತ್ಯ ಹೇಳಿದ್ದಾರೆ.