ಕುಡಿದ ಮತ್ತಿನಲ್ಲಿ ರಿಕ್ಷಾಗೆ ಡಿಕ್ಕಿ ಹೊಡೆದ ಕಾಂಗ್ರೆಸ್‌ ಶಾಸಕನ ಅಳಿಯ: ಆರು ಜನರ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ವೇಗವಾಗಿ ಬಂದ ಎಸ್‌ಯುವಿ ವಾಹನವೊಂದು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ. ಗುಜರಾತ್‌ನ ಆನಂದ್ ಜಿಲ್ಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಎಸ್‌ಯುವಿ ವಾಹನವು ಸೋಜಿತ್ರಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಪುನಂಭೈ ಮಾಧಭಾಯಿ ಪರ್ಮಾರ್ ಅವರ ಅಳಿಯ ಖೇತನ್ ಪಾಧಿಯಾರ್ ಎಂಬಾತನಿಗೆ ಸೇರಿದ್ದು ಅವರು ತಮ್ಮ ಎಸ್‌ಯುವಿಯನ್ನು ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.

ಸೋಜಿತ್ರಾ ಗ್ರಾಮದ ಬಳಿ ತಾರಾಪುರದಿಂದ ಆನಂದ್ ಪಟ್ಟಣವನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಕಾರು ಚಾಲಕ ಕುಡಿದ ಮತ್ತಿನಲ್ಲಿದ್ದ ಎನ್ನಲಾಗಿದೆ. ರಾತ್ರಿ 7 ಗಂಟೆ ಸುಮಾರಿಗೆ ಕಾರು, ಬೈಕ್ ಹಾಗೂ ಆಟೋ ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, ಆಟೋದಲ್ಲಿದ್ದ ನಾಲ್ವರು ಹಾಗೂ ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರು ಚಾಲಕ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರನ್ನು ಸೋಜಿತ್ರದ ನವಗಡ ಗ್ರಾಮದ ನಿವಾಸಿಗಳಾದ ಜಿಯಾಬೆನ್ ಮಿಸ್ತ್ರಿ ಮತ್ತು ಜಾನ್ವಿಬೆನ್ ಮಿಸ್ತ್ರಿ, ಅವರ ತಾಯಿ ವಿನಬೆನ್ ಮಿಸ್ತ್ರಿ, ಆಟೋರಿಕ್ಷಾ ಚಾಲಕ ಯಾಸನ್ ವೋಹ್ರಾ, ಆನಂದ್ ನಿವಾಸಿಗಳಾದ ಯೋಗೇಶ್ ಓಡ್ ಮತ್ತು ಸಂದೀಪ್ ಓಡ್ ಎಂದು ಗುರುತಿಸಲಾಗಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!