ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿಯಿಂದ ಶಿಕ್ಷಕರ ಕ್ಷೇತ್ರದಿಂದ ಎಂ ಎಲ್ ಸಿಯಾಗಿದ್ದಂತ ಪುಟ್ಟಣ್ಣ ಅವರು ಇಂದು ಪಕ್ಷವನ್ನು ತೊರೆದು, ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ. ಈ ಮೂಲಕ ಬಿಜೆಪಿಗೆ ಬಿಗ್ ಶಾಕ್ ನೀಡಿದ್ದಾರೆ.
ಇಂದು ಕೆಪಿಸಿಸಿ ಕಚೇರಿಯಲ್ಲಿ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಎಂ ಎಲ್ ಸಿ ಆಗಿ ಆಯ್ಕೆಯಾಗಿದ್ದಂತ ಬಿಜೆಪಿ ಎಂಎಲ್ಸಿ ಎಸ್. ಹೆಚ್. ಪುಟ್ಟಣ್ಣ ಅವರು, ತಮ್ಮ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ಧರಾಮಯ್ಯ ನೇತೃತ್ವದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ.
ಈ ಕುರಿತಂತೆ ಟ್ವಿಟ್ ಮಾಡಿರುವಂತ ರಣದೀಪ್ ಸುರ್ಜೇವಾಲ ಅವರು, ಶೇ.40ರ ಬಿಜೆಪಿ ಸರ್ಕಾರ ಮತ್ತು ಅದರ ಯುವಜನ ವಿರೋಧಿ, ಶಿಕ್ಷಕ ವಿರೋಧಿ ನೀತಿಗಳಿಂದ ಬೇಸತ್ತ ಬಿಜೆಪಿ ಎಂಎಲ್ಸಿ ಪುಟ್ಟಣ್ಣ ಅವರು ಇಂದು ಎಂಎಲ್ಸಿ ಮತ್ತು ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಎಂಎಲ್ ಸಿಯಾಗಿ 4 ವರ್ಷಗಳ ಅಧಿಕಾರಾವಧಿಯನ್ನು ಹೊಂದಿದ್ದಾರೆ. ಕಾಂಗ್ರೆಸ್ನಲ್ಲಿ ನಾವು ಅವರ ದಿಟ್ಟ ಮತ್ತು ಧೈರ್ಯಶಾಲಿ ಕ್ರಮವನ್ನು ಶ್ಲಾಘಿಸುತ್ತೇವೆ. ಬಿಜೆಪಿಯ ರಿವರ್ಸ್ ಕೌಂಟ್ ನಡೆಯುತ್ತಿದೆ ಎಂದು ಹೇಳಿದ್ದಾರೆ.
Suffocated & stifled by the #40PercentSarkara & its anti-youth, anti-teacher policies, Sh Puttanna, BJP MLC today resigned as MLC & from BJP Membership.
He has 4 years tenure as MLC remaining.
We at @INCKarnataka commend his bold and courageous move.
BJP’s reverse count is on. pic.twitter.com/xYPgWSIcPO
— Randeep Singh Surjewala (@rssurjewala) March 9, 2023