ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರತ್ಯೇಕ ದೇಶದ ಕುರಿತು ಮಾತನಾಡಿದ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ (D.K.Suresh) ವಿರುದ್ಧ ಸಂವಿಧಾನಾತ್ಮಕ ಕ್ರಮ ಕೈಗೊಳ್ಳಬೇಕು ಮತ್ತು ಕಾಂಗ್ರೆಸ್ ಪಕ್ಷ ದೇಶದ ಕ್ಷಮೆ ಕೇಳಬೇಕು ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಆಗ್ರಹಿಸಿದ್ದಾರೆ.
ಸಂಸತ್ ಅಧಿವೇಶನದಲ್ಲಿ ಈ ಬಗ್ಗೆ ಧ್ವನಿ ಎತ್ತಿದ ಜೋಶಿ , ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ದೇಶ ವಿಭಜನೆ ಹೇಳಿಕೆ ನೀಡುವ ಮೂಲಕ ಭಾರತೀಯ ಸಂವಿಧಾನಕ್ಕೆ, ಡಾ.ಅಂಬೇಡ್ಕರ್ಗೆ ಅಪಮಾನ ಎಸಗಿದ್ದಾರೆ. ರಾಷ್ಟ್ರದ ಅಖಂಡತೆಗೆ ಧಕ್ಕೆ ತಂದಿದ್ದಾರೆ. ಹಾಗಾಗಿ ಇವರ ವಿರುದ್ಧ ಕಾನೂನಾತ್ಮಕ ಕ್ರಮವಾಗಲೇಬೇಕು ಎಂದು ಆಗ್ರಹಿಸಿದ್ದಾರೆ.
ಪಕ್ಷದ ಸದಸ್ಯ, ಸಂಸದನ ದೇಶ ಒಡೆಯುವ ಹೇಳಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ (Sonia Gandhi) ದೇಶದ ಕ್ಷಮೆ ಯಾಚಿಸಬೇಕು ಎಂದು ಜೋಶಿ ಆಗ್ರಹಿಸಿದ್ದಾರೆ.
ಸಂವಿಧಾನ ಮತ್ತು ಬಾಬಾಸಾಹೇಬ್ ಅಂಬೇಡ್ಕರ್ಗೆ ಘೋರ ಅವಮಾನ ಮಾಡಿರುವ ಡಿ.ಕೆ.ಸುರೇಶ್ ವಿರುದ್ಧ ಕ್ರಮ ಕೈಗೊಳ್ಳುವಂತೆ ನಾನು ಕಾಂಗ್ರೆಸ್ಗೆ ಒತ್ತಾಯಿಸುತ್ತೇನೆ. ಕಾಂಗ್ರೆಸ್ ಕ್ರಮ ಕೈಗೊಳ್ಳದೇ ಹೋದಲ್ಲಿ ದೇಶವನ್ನು ಛಿದ್ರಗೊಳಿಸುವ ಅವರ ಹೇಳಿಕೆಗೆ ಕಾಂಗ್ರೆಸ್ ಬೆಂಬಲವೂ ಇದೆ ಎಂದಂತಾಗುತ್ತದೆ ಎಂದು ಸಚಿವ ಜೋಶಿ ಕಾಂಗ್ರೆಸ್ ವಿರುದ್ಧ ಹರಿ ಹಾಯ್ದಿದ್ದಾರೆ.
ದೇಶ ಒಡೆಯುವ ನೀತಿ ಕಾಂಗ್ರೆಸ್ನ ಪರಂಪರೆಯಾಗಿಬಿಟ್ಟಿದೆ. ಈಗ ಅದೇ ಪಕ್ಷದ ಸಂಸದ, ಅದೂ ಒಬ್ಬ ಉಪ ಮುಖ್ಯಮಂತ್ರಿ ಸಹೋದರನ ದೇಶ ವಿಭಜನೆ ಹೇಳಿಕೆ ಸಂಬಂಧ ತನಿಖೆಗೆ ಎಥಿಕ್ಸ್ ಕಮಿಟಿ ರಚನೆಯಗಬೇಕು ಎಂದು ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಸದನವನ್ನು ಒತ್ತಾಯಿಸಿದರು.