ಸೋಲಿನ ಪಯಣದಲ್ಲಿ ಕಾಂಗ್ರೆಸ್: ನಿರ್ಮಲ್ ಕುಮಾರ್ ಸುರಾಣ

ಹೊಸದಿಗಂತ ವರದಿ, ಹುಬ್ಬಳ್ಳಿ:

ಭಾರತವನ್ನು ಒಡೆದು ಆಳಿದ ಕಾಂಗ್ರೆಸ್ ಪಕ್ಷ ಈಗಾಗಲೇ ಸೋಲಿನ ಪಯಣದಲ್ಲಿದೆ. ತನ್ನ ಅಸ್ತಿತ್ವದ ಚಿಂತೆಯಿಂದ ಬಿಜೆಪಿ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತ ಜನರ ದಿಕ್ಕು ತಪ್ಪಿಸುವ ಕೆಲಸವನ್ನು ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಉಸ್ತುವಾರಿ ನಿರ್ಮಲ್ ಕುಮಾರ್ ಸುರಾಣ ಹೇಳಿದ್ದಾರೆ.

ಮಂಗಳವಾರ ನಡೆದ ಬೆಳಗಾವಿ ಗ್ರಾಮಾಂತರ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಮೇಲೆ ೪೦ ಪರ್ಸಂಟ್ ಆರೋಪ ಮಾಡುವ ಕಾಂಗ್ರೆಸ್ ನಾಯಕರಿಗೆ ಈವರೆಗೂ ಅದನ್ನೂ ಸಾಬೀತು ಪಡಿಸಲು ಏಕೆ ಆಗಿಲ್ಲ ಎಂದು ಪ್ರಶ್ನಿಸಿದರು.

ಈ ವೇಳೆ ರಾಜಸಭಾ ಸದಸ್ಯ ಈರಣ್ಣ ಕಡಾಡಿ , ಶಾಸಕ ಮಹಾಂತೇಶ ದೊಡಗೌಡರ ,ಸಂಸದೆ ಮಂಗಲ ಅಂಗಡಿ ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!