ಹೊಸದಿಗಂತ ವರದಿ ಧಾರವಾಡ:
ರಾಜ್ಯದ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಧಾರವಾಡ ಗ್ರಾಮೀಣ ಕೂಡ ಒಂದು. ಇಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಮುನ್ನಡೆ ಸಾಧಿಸಿದ್ದಾರೆ.
ಈಗಾಗಲೇ ಎಂಟು ಸುತ್ತಿನ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದೆ. ಸುಮಾರು 10,136 ಮತಗಳ ಅಂತರದಿಂದ ಕಾಂಗ್ರೆಸ್ನ ವಿನಯ್ ಕುಲಕರ್ಣಿ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.
ವಿನಯ್ 43,984 ಮತ ಪಡೆದಿದ್ದು, 33,808 ಮತ ಪಡೆದ ಬಿಜೆಪಿ ಅಭ್ಯರ್ಥಿ ಅಮೃತ ದೇಸಾಯಿ ಹಿನ್ನಡೆ ಸಾಧಿಸಿದ್ದಾರೆ. ಇನ್ನೂ 9 ಸುತ್ತಗಳ ಮತ ಎಣಿಕೆ ಕಾರ್ಯ ಬಾಕಿ ಇದ್ದು, ಫಲಿತಾಂಶ ಅದಲು-ಬದಲು ಆದರೂ ಆಶ್ಚರ್ಯವಿಲ್ಲ.