ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಭಾರತ್ ಜೋಡೋ ಯಾತ್ರೆಗೆ ನಾಳೆ ಬ್ರೇಕ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನಾಳೆ ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಭಾರತ್ ಜೋಡೋ ಯಾತ್ರೆಗೆ ನಾಳೆ ಬ್ರೇಕ್ ಬೀಳಲಿದೆ.
ಹೌದು, ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಮುನ್ನುಗ್ಗುತ್ತಿದ್ದು, ಚುನಾವಣೆ ಹಿನ್ನೆಲೆ ( ಅ.17) ರಂದು ಭಾರತ್ ಜೋಡೋ ಯಾತ್ರೆಗೆ ಬಿಡುವು ನೀಡಲಾಗಿದೆ.
ಬಳ್ಳಾರಿ ತಾಲೂಕಿನ ಸಿಂಧವಾಳ್ ಕ್ರಾಸ್ ಬಳಿ ರಾಹುಲ್ ಗಾಂಧಿ ನೇತೃತ್ವದ ಪಾದಯಾತ್ರೆ ಇಂದಿಗೆ ಮುಕ್ತಾಯಗೊಂಡಿದೆ. ನಂತರ ಆಂಧ್ರ ಪ್ರದೇಶದ ಮೂಲಕ ರಾಯಚೂರಿಗೆ ರಾಹುಲ್ ಯಾತ್ರೆ ತೆರಳಲಿದೆ.
ಈಗಾಗಲೇ ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರು ಅವರು ವಿವಿಧ ರಾಜ್ಯಗಳಿಗೆ ಭೇಟಿ ನೀಡಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ಮನ ಗೆಲ್ಲುವ ಕಸರತ್ತು ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!