ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಕ್ಷೇತ್ರಗಳ ಗೆದ್ದರೆ ಮುಂದಿನ ಐದು ವರ್ಷಗಳವರೆಗೆ ಮುಖ್ಯಮಂತ್ರಿ ಆಗಿ ಸಿಎಂ ಸಿದ್ದರಾಮಯ್ಯ ಮುಂದುವರೆಯಲಿದ್ದಾರೆ ಎಂಬ ಯತಿಂದ್ರ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದು , ಲೋಕಸಭಾ ಚುನಾವಣೆ ಹೊತ್ತಿಗೆ ಕಾಂಗ್ರೆಸ್ ನಲ್ಲಿ ಇನ್ನೂ ದೊಡ್ಡ ಮಟ್ಟದ ಬಿರುಕು ಉಂಟಾಗುತ್ತದೆ ಎಂದು ತಿಳಿಸಿದರು.
ಉಡುಪಿಯಲ್ಲಿ ಈ ವಿಷಯದ ಬಗ್ಗೆ ಮಾತನಾಡಿದ ಅವರು, ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ 5 ವರ್ಷ ಸಿಎಂ ಎಂದು ಯತೀಂದ್ರ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದು, ಸರ್ಕಾರ ಆರಂಭವಾದ ಮೊದಲ ದಿನದಿಂದಲೇ ಈ ವಿಷಯವಾಗಿ ಗೊಂದಲ ಇದೆ ಸಿಎಂ, ಡಿಸಿಎಂ, ಮಂತ್ರಿ ಹಾಗೂ ಶಾಸಕರ ನಡುವೆ ಗೊಂದಲವಿದೆ ಎಂದು ತಿಳಿಸಿದರು.
ಈಗ ಕಾಂಗ್ರೆಸ್ ನಾಯಕರು ಗುಂಪಾಗಿ ರೆಸಾರ್ಟ್ ರಾಜಕೀಯ ಮಾಡಲು ಯೋಚನೆ ಮಾಡುತ್ತಿದ್ದಾರೆ.ಕಾಂಗ್ರೆಸ್ ನಲ್ಲಿ ಅಧಿಕಾರಕ್ಕಾಗಿ ಹೊಡೆದಾಟ ನಡೆಯುತ್ತಿದೆ.ಲೋಕಸಭೆ ಚುನಾವಣೆ ವೇಳೆಗೆ ಕಾಂಗ್ರೆಸ್ ಬಿರುಕು ದೊಡ್ಡದಾಗುತ್ತದೆ. ಯಾವ ಹಂತಕ್ಕೆ ತಲುಪುತ್ತೆ ಎಂದು ಜನರು ಊಹೆ ಮಾಡಲು ಕಷ್ಟ ಎಂದರು.