ಕಾಂಗ್ರೆಸ್ ಲಿಂಗಾಯತರನ್ನ ಸಿಎಂ ಅಭ್ಯರ್ಥಿಯಾಗಿ ಘೋಷಣೆ ಮಾಡಲಿ: ಕಟೀಲ್ ಸವಾಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಾಜ್ಯದಲ್ಲಿ ಬಿಜೆಪಿ ಲಿಂಗಾಯತ ಮುಖ್ಯಮಂತ್ರಿಯನ್ನೇ ಆಯ್ಕೆ ಮಾಡುತ್ತದೆ ಎಂಬ ಹೇಳಿಕೆ ಪುನರುಚ್ಛರಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ನಾವು ಯಡಿಯೂರಪ್ಪ ಮಾರ್ಗದರ್ಶನ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆಗೆ ಹಾಜರಾಗುತ್ತಿದ್ದೇವೆ ಎಂದು ಹೇಳಿದರು.

ಮಂಗಳೂರಿನಲ್ಲಿ ಮಾತನಾಡಿದ ನಳೀನ್‌ ಕುಮಾರ್‌ ಕಟೀಲ್‌, ಎಲ್ಲಾ ಸಂಧರ್ಭದಲ್ಲಿ ಬಿಜೆಪಿ ಮಾತ್ರ ಲಿಂಗಾಯತರನ್ನ ಮುಖ್ಯಮಂತ್ರಿ ಮಾಡುತ್ತದೆ. ಬೇರೆ ಯಾವ ಪಕ್ಷಕ್ಕೂ ಆ ತಾಕತ್ತಿಲ್ಲ, ಇದ್ದರೆ ಘೋಷಣೆ ಮಾಡಲಿ. ಕಾಂಗ್ರೆಸ್ ಲಿಂಗಾಯತರನ್ನ ಸಿಎಂ ಅಭ್ಯರ್ಥಿಯಾಗಿ ಘೋಷಿಸಲಿ ಎಂದು ಸವಾಲು ಹಾಕಿದರು.

ಕಾಂಗ್ರೆಸ್‌ಗೆ ಬಹಳ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಕೊರತೆ ಇದೆ. ಡಿಸೆಂಬರ್​ನಲ್ಲೇ ಅವರು ಆಯ್ಕೆ ಪ್ರಕ್ರಿಯೆ ಆರಂಭಿಸಿದರೂ ಈವರೆಗೆ ಆಗಿಲ್ಲ. ನಾವು ಹತ್ತು ದಿವಸದಲ್ಲಿ ಅಭ್ಯರ್ಥಿ ಅಯ್ಕೆ ಪ್ರಕ್ರಿಯೆ ಮುಗಿಸಿದ್ದೇವೆ, ಅವರು ನಾಲ್ಕು ತಿಂಗಳಾದರೂ ಮುಗಿಸಿಲ್ಲ. ಅವರಿಗೆ ಅಭ್ಯರ್ಥಿ ಕೊರತೆ ಇದೆ ಎಂದರು.

ನಮ್ಮ ಬಂಡುಕೋರರಾಗಿ ಹೊರ ಬರುವ ಅಭ್ಯರ್ಥಿಗಳನ್ನು ಕಾಯುತ್ತಿದ್ದಾರೆ. ಕಾಂಗ್ರೆಸ್ ನ ಹೀನಾಯ ಸ್ಥಿತಿ ನೋಡಿ ಬೇಸರವಾಗುತ್ತಿದೆ. ಅವರಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಫೈಟ್ ನಡೆಯುತ್ತಾ ಇದೆ. ಡಿಕೆಶಿ, ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಜೊತೆ ಈಗ ಪರಮೇಶ್ವರ್ ಕೂಡ ಸಿಎಂ ರೇಸ್​ನಲ್ಲಿದ್ದಾರೆ ಎಂದು ಮಾತನಾಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!