ಹುಬ್ಬಳ್ಳಿ: ಬಿಜೆಪಿ ಜಗತ್ತಿನ ನಂಬರ್ 1 ರಾಷ್ಟ್ರೀಯ ಪಕ್ಷ ಎಂಬ ಹೆಗ್ಗಳಿಕೆಗೆ ಪಾತ್ರ್ರವಾಗಿದೆ. ಜನಸಾಮಾನ್ಯರ ವಿಶ್ವಾಸವನ್ನು ಸಹ ಗಳಿಸಿಕೊಂಡಿದೆ. ಆದರೆ ಕಾಂಗ್ರೆಸ್ ಪರಿಸ್ಥಿತಿ ಸಂಪೂರ್ಣ ಭಿನ್ನ, ಅದೊಂದು ಮುಳುಗುತ್ತಿರುವ ಹಡಗು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.
ನಗರದ ಖಾಸಗಿ ಹೊಟೇಲ್ನಲ್ಲಿ ಹು-ಧಾ ಸೇಂಟ್ರಲ್ ಕ್ಷೇತ್ರದ ಕಾರ್ಯಕಾರಿಣಿ ಸಭೆಗೆ ಗುರುವಾರ ಚಾಲನೆ ನೀಡಿ ಮಾತನಾಡಿದರು.
ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿಯಿಲ್ಲ ಎಂಬುದಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಹಾರ್ದಿಕ್ ಪಟೇಲ್ ಅವರು ಪತ್ರ ಬರೆದಿರುವುದು ನಿದರ್ಶನ. ಪಂಚರಾಜ್ಯ ಚುನಾವಣೆಯಲ್ಲಿ ಸೋತರೂ ಪಕ್ಷ ಸಂಘಟನೆ ವಿಚಾರವವನ್ನು ಗಂಭೀರವಾಗಿ ಪರಿಗಣಿಸಿಸಿಲ್ಲ ಎಂದು ಹಾರ್ದಿಕ್ ಆರೋಪಿಸಿದ್ದಾರೆ ಎಂದು ಹೇಳಿದರು.
ರಾಜ್ಯದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಏನೇ ಮಾಡಿದರೂ ಕಾಂಗ್ರೆಸ್ ಉದ್ದಾರವಾಗಲ್ಲ ಎಂದು ವ್ಯಂಗ್ಯವಾಡಿದರು.
ಮುಂಬರುವ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳಿಸುವ ಗುರಿ ಹೊಂದಿದ್ದು, 130 ಕ್ಷೇತ್ರಗಳಲ್ಲಿ ಸಲೀಸಾಗಿ ಜಯಗಳಿಸಲಿದೆ. ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಮನೆ ಮನೆಗೆ ತಲುಸುವಂತಹ ಕಾರ್ಯ ಮಾಡಬೇಕು ಎಂದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ