ಕೋವಿಡ್ ಕರ್ಫ್ಯೂ ನಡುವೆ ಇಂದು ಕಾಂಗ್ರೆಸ್ ನಿಂದ ಬೃಹತ್ ಮೇಕೆದಾಟು ಪಾದಯಾತ್ರೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆಗೆ ಚಾಲನೆ ಸಿಕ್ಕಿದೆ. ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಈ ಪಾದಯಾತ್ರೆ ಪ್ರಾರಂಭವಾಗಿದೆ.

ಕನಕಪುರ ತಾಲೂಕಿನ ಮೇಕೆದಾಟು ಸಂಗಮದಿಂದ ಪಾದಯಾತ್ರೆ ಆರಂಭವಾಗಲಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಎಲ್ಲಾ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗಿಯಾಗಿಯಾಗಿದ್ದಾರೆ.

ಇಂದಿನಿಂದ 10 ದಿನಗಳ ಕಾಲ ಮೇಕೆದಾಟು ಪಾದಯಾತ್ರೆ ನಡೆಯಲಿದೆ. ವೇದಿಕೆ ಕಾರ್ಯಕ್ರಮದ ಬಳಿಕ ಸಂಗಮದಿಂದ 15 ಕಿ.ಮೀ ಪಾದಯಾತ್ರೆ ನಡೆಯಲಿದ್ದು, ದೊಡ್ಡ ಆಲಹಳ್ಳಿಯವರೆಗೆ ಪಾದಯಾತ್ರೆ ನಡೆಯಲಿದೆ.

ರಾಜ್ಯ ಸರ್ಕಾರದ ವೀಕೆಂಡ್ ಕರ್ಫ್ಯೂ ನಡುವೆಯೂ ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿದೆ. ಪಾದಯಾತ್ರೆ ನಡೆಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಸೂಚಿಸಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!