ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ ಮಾಡಲಾಗಿದೆ.
ಈ ಬಾರಿ ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಧ್ವಜಾರೋಹಣ ನೆರವೇರಿಸಿದ್ದಾರೆ.
ಧ್ವಜಾರೋಹಣೆ ನಂತರ ಡಿಕೆಶಿ ಮಾತನಾಡಿದ್ದು, ಇದೇ ಮೊದಲ ಬಾರಿಗೆ ಖರ್ಗೆ ಅವರು ನಮ್ಮೊಂದಿಗೆ ಗಣರಾಜ್ಯೋತ್ಸವ ಆಚರಣೆಯಲ್ಲಿ ಭಾಗಿಯಾಗಿದ್ದಾರೆ. ಕಾಂಗ್ರೆಸ್ನ್ನು ಜನರು ಪ್ರೀತಿಸಿ ಅಧಿಕಾರ ನೀಡಿದ್ದಾರೆ. ಜನರೇ ಅಧಿಕಾರಕ್ಕೆ ಬಂದಿದ್ದಾರೆ ಎಂದು ತಿಳಿದುಕೊಳ್ಳಿ. ಜನಪರ ಕೆಲಸಗಳನ್ನೇ ಮಾಡೋಣ. ಸಂವಿಧಾನ ಉಳಿಯಬೇಕು, ನಮ್ಮ ರಾಷ್ಟ್ರ ನಾಯಕರು ಹಾಕಿಕೊಟ್ಟ ಮಾರ್ಗದರ್ಶನದಂತೆ ಮುನ್ನಡೆಯೋಣ ಕಾಂಗ್ರೆಸ್ ದೇಶದ ಶಕ್ತಿ ಎಂದು ಹೇಳಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿ ಹಿಂಭಾಗದ ಭಾರತ್ ಜೋಡೋ ಸಭಾಂಗಣದಲ್ಲಿ ಇಂದು 75ನೇ ಗಣರಾಜ್ಯೋತ್ಸವದ ಪ್ರಯುಕ್ತ ಎಐಸಿಸಿ ಅಧ್ಯಕ್ಷರಾದ ಶ್ರೀ @kharge ಹಾಗೂ ಮುಖ್ಯಮಂತ್ರಿಗಳೊಂದಿಗೆ ಧ್ವಜಾರೋಹಣ ನೆರವೇರಿಸಿ, ಮಾತನಾಡಿದೆ.
ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ಈ ದೇಶದ ಇತಿಹಾಸ. ಇದನ್ನು ಯಾರೂ ಬದಲಿಸಲು ಸಾಧ್ಯವಿಲ್ಲ.… pic.twitter.com/s3QZjmCQ2T
— DK Shivakumar (@DKShivakumar) January 26, 2024