ಹೊಸದಿಗಂತ ವರದಿ, ಹುಬ್ಬಳ್ಳಿ:
ಕಲಘಟಗಿ ಅಳ್ನಾವರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಂಚಿತ ನಾಗರಾಜ ಛಬ್ಬಿ ಭಾನುವಾರ ಬಿಜೆಪಿ ಸೇರ್ಪಡೆಯಾದರು. ದೆಹಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ, ಸಚಿವ ಗೋವಿಂದ ಕಾರಜೋಳ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು. ಮಾಜಿ ಸಚಿವ ಸಂತೋಷ ಲಾಡ್ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ನಾಗರಾಜ ಛಬ್ಬಿ ಮಧ್ಯೆ ಕಾಂಗ್ರೆಸ್ ಟಿಕೆಟ್ಗೆ ಭಾರಿ ಪೈಪೋಟಿ ನಡೆದಿತ್ತು. ಕಾಂಗ್ರೆಸ್ ಕೈ ತಪ್ಪುತ್ತಿದ್ದಂತೆಯೇ ಆಕ್ರೋಶ ವ್ಯಕ್ತಪಡಿಸಿದ್ದ ನಾಗರಾಜ ಛಬ್ಬಿ ಬಿಜೆಪಿ ಮುಖಂಡರ ಭೇಟಿಯಾಗಿ ಮಾತುಕತೆ ನಡೆಸಿದ್ದರು.