ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸೋಲಾಗಲಿದೆ ಎಂದು ಕೇಂದ್ರದ ಮಾಜಿ ಸಚಿವ ಅಶ್ವನಿ ಕುಮಾರ್ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ತಮ್ಮದೇ ಆದ ಸ್ಥಾನ ಪಡೆದುಕೊಂಡಿದ್ದ ಅಶ್ವನಿ ಅವರು ನಿನ್ನೆಯಷ್ಟೆ ಪಕ್ಷ ತೊರೆದಿದ್ದಾರೆ.ಪಕ್ಷ ತ್ಯಜಿಸಿದ ಬೆನ್ನಲ್ಲೇ ಪಂಜಾಬ್ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ ವಿರುದ್ಧ ಕಿಡಿಕಾರಿದ್ದಾರೆ.
ಪಂಜಾಬ್ ನಲ್ಲಿ 2-3 ಕಾಂಗ್ರೆಸ್ ನಾಯಕರನ್ನು ಹೊರತುಪಡಿಸಿ ಬೇರೆ ಯಾರೂ ಪಕ್ಷಕ್ಕಾಗಿ ಕೆಲಸ ಮಾಡಿಲ್ಲ. ಫೆ.20ರಂದು ಪಂಜಾಬ್ ನಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸೋಲಾಗಲಿದೆ. ಆಮ್ ಆದ್ಮಿ ಪಕ್ಷ ಜಯ ಗಳಿಸಲಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಚನ್ನಿ ಬಡ ಕುಟುಂಬದವರು ಎಂದು ಹೇಳಿಕೊಳ್ಳುತ್ತಾರೆ. ಆದರೆ 10 ರಿಂದ 12 ಕೋಟಿ ರೂ. ಮನೆ ಹೇಗೆ ಬಂತು? ಪಂಜಾಬ್ ನಲ್ಲಿ ಕಾಂಗ್ರೆಸ್ ಬಗ್ಗೆ ಗೇಲಿ ಮಾಡಲಾಗುತ್ತಿದೆ ಎಂದು ಚನ್ನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.