ELECTION| ಮುನ್ನಡೆ ಬೆನ್ನಲ್ಲೇ ಬೆಂಗಳೂರಿಗೆ ಬರುವಂತೆ ಶಾಸಕರಿಗೆ ಕಾಂಗ್ರೆಸ್‌ ಬುಲಾವ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆಯ ಆರಂಭಿಕ ಟ್ರೆಂಡ್‌ಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು, ಪಕ್ಷವು ತನ್ನ ಎಲ್ಲಾ ಶಾಸಕರನ್ನು ಇಂದು ಬೆಂಗಳೂರಿಗೆ ತಲುಪುವಂತೆ ಹೇಳಿದ್ದಾಗಿ ಪಕ್ಷದ ಮೂಲಗಳು ಬಹಿರಂಗಪಡಿಸಿವೆ.

ಶಾಸಕರನ್ನು ಬೆಂಗಳೂರಿಗೆ ಕರೆದೊಯ್ಯಲು ರಾಜ್ಯದ ದೂರದ ಪ್ರದೇಶಗಳಲ್ಲಿ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿದ್ದು, ಇದೆಲ್ಲದರ ಮೇಲ್ವಿಚಾರಣೆಗೆ ವೀಕ್ಷಕರನ್ನು ಸಹ ನೇಮಿಸಲಾಗಿದೆ.

ಭಾರತೀಯ ಚುನಾವಣಾ ಆಯೋಗದ ಪ್ರಕಾರ ಬೆಳಿಗ್ಗೆ 9.30ರ ಹೊತ್ತಿಗೆ ಕಾಂಗ್ರೆಸ್ 63 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಬಿಜೆಪಿ 42, ಜೆಡಿಎಸ್ 9, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ 1 ಮತ್ತು ಸ್ವತಂತ್ರ 2 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಮೇ 10 ರಂದು ಮತದಾನ ಮುಗಿದ ನಂತರ ಹೊರಬಿದ್ದ ಎಕ್ಸಿಟ್ ಪೋಲ್‌ಗಳು ಹಂಗ್ ಅಸೆಂಬ್ಲಿಯನ್ನು ಭವಿಷ್ಯ ನುಡಿದಿದ್ದು ಕೆಲವು ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರಕ್ಕೆ ಮರಳುತ್ತದೆ ಎಂದು ತೋರಿಸಿದೆ. ಬಹುತೇಕ ಎಕ್ಸಿಟ್ ಪೋಲ್‌ಗಳು ಬಿಜೆಪಿ ಅರ್ಧದಷ್ಟು ಅಂದರೆ 113 ಕ್ಕೆ ಕುಸಿಯಲಿದೆ ಎಂದು ಭವಿಷ್ಯ ನುಡಿದಿದ್ದವು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!