ಹೊಸದಿಗಂತ ಹುಬ್ಬಳ್ಳಿ:
ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ. ಇನ್ನೂ ನ್ಯಾಯ ಒದಗಿಸುವುದು ಹೇಗೆ ಸಾಧ್ಯ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರಶ್ನಿಸಿದ್ದಾರೆ.
ಶನಿವಾರ ಕಾರವಾರ ರಸ್ತೆ ಅರವಿಂದ ನಗರದ ನೂತನ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸಂಸ್ಥಾಪಕರ ದಿನಾಚರಣೆಯಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಕಳೆದ ಬಾರಿಯೂ ಸಹ ಇಂತಹ ಅನೇಕ ಯೋಜನೆ ಘೋಷಿಸಿದ್ದರು. ಆದರೆ ಏನಾಯಿತು? ದೇಶದ ಜನರಿಗೆ ಇವರು ಸುಳ್ಳು ಹೇಳುವುಯದರ ಬಗ್ಗೆ ಗೊತ್ತಿದೆ ಎಂದು ಹರಿಹಾಯ್ದರು.
ಕಾಂಗ್ರೆಸ್ ನ್ಯಾಯ ಯೋಜನೆಗಳಿಗೆ ಮಹತ್ವ ನೀಡುವ ಅವಶ್ಯಕತೆ ಇಲ್ಲ. ಮತ ಬ್ಯಾಂಕ್ ಹಾಗೂ ಅಧಿಕಾರಕ್ಕೆ ಬರಲು ಸುಳ್ಳು ಹೇಳುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಕನಸಿನ ಮಾತು ಎಂದು ಹೇಳಿದರು.
ಪ್ರಧಾನಿ ಮೋದಿ ಅವರು ಅಧಿಕಾರಕ್ಕೆ ಬಂದ ಮೇಲೆ ವಸತಿ, ಕುಡಿಯುವ ನೀರು ಸೇರಿದಂತೆ ಅನೇಕ ಯೋಜನೆ ನೀಡಿದ್ದಾರೆ. ಕಾಂಗ್ರೆಸ್ ಕಳೆದ ಬಾರಿ ದೇಶದಲ್ಲಿ 52 ಸ್ಥಾನ ಗೆದ್ದಿದ್ದರು. ಈ ಬಾರಿ ಅಷ್ಟು ಸಹ ಬರುವುದಿಲ್ಲ. ರಾಜ್ಯದಲ್ಲಿ ಕೇವಲ 2 ಸ್ಥಾನ ಗೆಲ್ಲುತ್ತಾರೆ ಎಂಬ ಸಮೀಕ್ಷೆ ಬಂದಿದೆ. ನನಗೆ ತಿಳಿದ ಪ್ರಕಾರ ಅಷ್ಟು ಗೆಲ್ಲುವುದಿಲ್ಲ ಎಂದು ಹೇಳಿದರು.