ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳ ಚುನಾವಣಾ ಕಣ ರಂಗೇರುತ್ತಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಿದ್ದಾರೆ.
ದಮ್ದಮ್ನಲ್ಲಿ ಇಂದು ಚುನಾವಣಾ ಪ್ರಚಾರ ನಡೆಸಿದ ಶಾ, ಈ ಬಾರಿ ಕಾಂಗ್ರೆಸ್ ಒಂದು ಸ್ಥಾನದಲ್ಲೂ ಗೆಲುವು ಸಾಧಿಸುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.
ರಾಹುಲ್ ಗಾಂಧಿ ಅವರೇ, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಹೀನಾಯವಾಗಿ ಸೋಲಲಿದೆ. ಬಂಗಾಳ ಜೊತೆಗೆ ಅಸ್ಸಾಂ ನಲ್ಲೂ ಶೂನ್ಯ ಸಾಧನೆ ಮಾಡಲಿದ್ದು, ತಮಿಳನಾಡು ಮತ್ತು ಪುದುಚೇರಿಯಲ್ಲಿ ಒಂದಕ್ಕಿ ಗೆಲುವುದೇ ಅನುಮಾನ ಎಂದು ಶಾ ತಿರುಗೇಟು ನೀಡಿದರು.
ಈ ವೇಳೆ ಪ್ರಧಾನಿ ಮೋದಿ ವಿರುದ್ಧ ನಾಲಿಗೆ ಹರಿಬಿಟ್ಟ ಖರ್ಗೆ ವಿರುದ್ಧ ಗುಡುಗಿದ ಶಾ, ರಾಹುಲ್ ಗಾಂಧಿ ಜೊತೆ ಸೇರಿ ಖರ್ಗೆ ಅವರೂ ಕೂಡ ಅವರಂತೆ ಆಗಿದ್ದಾರೆ. ಇದಕ್ಕೆಲ್ಲ ದೇಶದ ಜನರೇ ಉತ್ತರ ನೀಡಲಿದ್ದಾರೆ ಎಂದು ಹೇಳಿದರು.



