ಕಾಂಗ್ರೆಸ್ 40ಕ್ಕಿಂತ ಹೆಚ್ಚು ಸೀಟುಗಳನ್ನು ಗೆಲ್ಲಲಾಗದ ಸ್ಥಿತಿಗೆ ತಲುಪಲಿದೆ: ಬಿವೈ ವಿಜಯೇಂದ್ರ ಭವಿಷ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿದ್ದರಾಮಯ್ಯ ಸರ್ಕಾರದ ಪೊಳ್ಳು ಭರವಸೆಗಳಿಗೆ ರಾಜ್ಯದ ಜನತೆ ಮರುಳಾಗುವುದಿಲ್ಲ, ಮುಖ್ಯಮಂತ್ರಿಗಳು ಜನರನ್ನು ದಾರಿ ತಪ್ಪಿಸುವ ಕೆಲಸವನ್ನು ಮೊದಲು ಬಿಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಕೇಂದ್ರದಲ್ಲಿ ಸರ್ಕಾರ ರಚಿಸುವ ಕನಸು ಕಾಣುತ್ತಿದ್ದಾರೆ. I.N.D.I.A ಒಕ್ಕೂಟದಲ್ಲಿ ಪ್ರಧಾನಿಯಾಗಲು ಸಿದ್ಧವಿರುವ ಯಾರಾದರೂ ನಾಯಕರಿದ್ದಾರೆಯೇ? ಪ್ರಧಾನಿ ನರೇಂದ್ರ ಮೋದಿಯವರಿಗೆ ಸರಿಸಾಟಿಯಾದ ನಾಯಕನಿಲ್ಲದೇ I.N.D.I.A ಸಮ್ಮಿಶ್ರ ಸರ್ಕಾರ ಹೆಸರಿಲ್ಲದಂತಾಗಲಿದೆ ಎಂಬುದನ್ನು ಅರ್ಥಮಾಡಿಕೊಂಡು ಸಿದ್ದರಾಮಯ್ಯ ಅವರು ತಮ್ಮ ವಾಗ್ದಾಳಿಯನ್ನು ನಿಲ್ಲಿಸಬೇಕು ಎಂದು ವಿಜಯೇಂದ್ರ ಹೇಳಿದರು.

ಚುನಾವಣೆಯಲ್ಲಿ 100 ಸೀಟು ಗೆಲ್ಲುವ ಯೋಚನೆಯಲ್ಲಿರುವ ಕಾಂಗ್ರೆಸ್ 40ಕ್ಕೂ ಹೆಚ್ಚು ಸ್ಥಾನ ಗೆಲ್ಲಲು ಸಾಧ್ಯವಾಗದ ಸ್ಥಿತಿಗೆ ಬರಲಿದೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!