ಕಾಂಗ್ರೆಸ್‌ ಗೆಲುವು: ಕರ್ನಾಟಕದ ಜನತೆಗೆ ಧನ್ಯವಾದ ಹೇಳಿದ ಪ್ರಿಯಾಂಕಾ ಗಾಂಧಿ ವಾದ್ರಾ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷ 130 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಕರ್ನಾಟಕದಲ್ಲಿ “ಐತಿಹಾಸಿಕ ಜನಾದೇಶ ನೀಡಿದ” ಪಕ್ಷದ ನಾಯಕರು ಮತ್ತು ಕಾರ್ಯಕರ್ತರಿಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಧನ್ಯವಾದ ಹೇಳಿದ್ದಾರೆ.

ಕಾಂಗ್ರೆಸ್‌ ಪಕ್ಷದ ಪರ ಐತಿಹಾಸಿಕ ತೀರ್ಪು ನೀಡಿದ ಕರ್ನಾಟಕದ ಜನತೆಗೆ ತುಂಬು ಹೃದಯದ ಧನ್ಯವಾದಗಳು. ಭ್ರಷ್ಟಾಚಾರ, ಕೋಮುವಾದ, ಬೆಲೆ ಏರಿಕೆ ವಿರುದ್ಧ ಕನ್ನಡಿಗರು ಕೈ ಏರಿಸಿದ್ದಾರೆ ಮತ್ತು ನಮ್ಮ ರಾಷ್ಟ್ರವನ್ನು ಒಗ್ಗೂಡಿಸುವುದಕ್ಕಾಗಿ ಕರ್ನಾಟಕದ ಜನತೆ ಕಾಂಗ್ರೆಸ್ ಕೈ ಹಿಡಿದಿದ್ದಾರೆ. ಕಾಂಗ್ರೆಸ್‌ ಕಾರ್ಯಕರ್ತರಿಗೆ ಮತ್ತು ಕರ್ನಾಟಕ ಕಾಂಗ್ರೆಸ್‌ನ ನಾಯಕರಿಗೆ ನನ್ನ ಹೃದಯಪೂರ್ವಕ ಧನ್ಯವಾದಗಳು. ನಿರಂತರ ಶ್ರಮಕ್ಕೆ ಪ್ರತಿಫಲ ಸಿಕ್ಕಿದೆ. ಕರ್ನಾಟಕದ ಜನತೆಗೆ ಕಾಂಗ್ರೆಸ್‌ ಪಕ್ಷವು ನೀಡಿದ್ದ ಭರವಸೆಗಳನ್ನು ಪೂರ್ಣಗೊಳಿಸಲು ಬದ್ಧ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!