ಕೇಂದ್ರ ನಾಯಕರಿಂದ ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವುದಿಲ್ಲ: ಗುಲಾಮ್ ನಬಿ ಅಜಾದ್

ಹೊಸದಿಗಂತ ಡಿಜಿಟಲ್‌ ಡೆಸ್ಕ್ :

ಕರ್ನಾಟಕ ಚುನಾವಣೆಗೆ ಎಲ್ಲಾ ರಾಜಕೀಯ ಪಕ್ಷಗಳು ರಣತಂತ್ರ ರೂಪಿಸುತ್ತಿದ್ದು, ಕಾಂಗ್ರೆಸ್ ಕೂಡ ಅಧಿಕಾರ ಹಿಡಿಯುವ ವಿಶ್ವಾಸದಲ್ಲಿದೆ. ಆದರೆ ಕರ್ನಾಟಕದಲ್ಲಿ ಕೇಂದ್ರ ಕಾಂಗ್ರೆಸ್ ನಾಯಕರು ಪ್ರಚಾರಕ್ಕೆ ಆಗಮಿಸಿದರೆ ಯಾವುದೇ ಉಪಯೋಗವಿಲ್ಲ ಎಂದು ಹಿರಿಯ ನಾಯಕ ಗುಲಾಮ್ ನಬಿ ಅಜಾದ್ ಹೇಳಿದ್ದಾರೆ.

ಕಾಂಗ್ರೆಸ್ ತೊರೆದು ಹೊಸ ಪಕ್ಷ ಸ್ಥಾಪಿಸಿರುವ ಗುಲಾಮ್ ನಬಿ ಆಜಾದ್,ಕರ್ನಾಟಕದಲ್ಲಿ ಕಾಂಗ್ರೆಸ್ ಕೇಂದ್ರ ನಾಯಕರಿಗೆ ಯಾವುದೇ ವರ್ಚಿಸಿಲ್ಲ. ಈ ನಾಯಕರಿಂದ ಯಾವುದೇ ಉಪಯೋಗವಿಲ್ಲ. ಸ್ಥಳೀಯ ನಾಯಕರೇ ಚುನಾವಣೆ ಗೆಲುವಿಗೆ ಶ್ರಮಿಸಬೇಕು ಎಂದು ಅಜಾದ್ ಕಿವಿ ಮಾತು ಹೇಳಿದ್ದಾರೆ.

ಕಾಂಗ್ರೆಸ್ ನಾಯಕರು ಯಾವುದೇ ರಾಜ್ಯಕ್ಕೆ ತೆರಳಿ ಪ್ರಚಾರ ಮಾಡಿದರೆ ಅದರಿಂದ ಯಾವುದೇ ಪ್ರಯೋಜನವಿಲ್ಲ. ಇದರಿಂದ ಯಾವ ಕ್ಷೇತ್ರದ ಸ್ಥಾನದ ಮೇಲೆ ಪರಿಣಾಮ ಬೀರಲ್ಲ. ಆಯಾ ರಾಜ್ಯದ ನಾಯಕರ ವರ್ಚಸ್ಸಿನಿಂದ ಚುನಾವಣೆ ಗೆಲ್ಲಬಹುದು ಎಂದು ಗುಲಾಮ್ ನಬಿ ಆಜಾದ್ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!