ಹೊಸದಿಗಂತ ವರದಿ ಗದಗ :
ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಅನಿಲ್ ಮೆಣಸಿಕಾಯಿಯವರು ಸೋಮವಾರ ನಗರದ ಉಪ ವಿಭಾಗಾಧಿಕಾರಿ ಕಛೇರಿಯಲ್ಲಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ಬಳಿಕ ಹೊರಗೆ ಬರುವ ವೇಳೆ ರಸ್ತೆಯಲ್ಲಿ ನಿಂತಿದ್ದ ಅನಿಲ್ ಮೆಣಸಿನಕಾಯಿ ಅವರ ಕಾರಿಗೆ ಕಾಂಗ್ರೆಸ್ ಕಾರ್ಯಕರ್ತರು ಕಲ್ಲು, ಬಾಟಲಿ ತೂರಿ ಕಾರಿನ ಗ್ಲಾಸನ್ನು ಒಡೆದು ಹಾಕಿರುವ ಘಟನೆ ಇಂದು ನಡೆದಿದೆ.
ಇದೇ ವೇಳೆ ಕಾಂಗ್ರೆಸ್ಸಿನ ಅಭ್ಯರ್ಥಿ ಶಾಸಕ ಎಚ್.ಕೆ. ಪಾಟೀಲ್ ಅವರು ನಾಮಪತ್ರ ಸಲ್ಲಿಕೆಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಸಾವಿರ ಸಂಖ್ಯೆಯಲ್ಲಿದ್ದ ಆಗಮಿಸಿದ್ದ ಎರಡು ಪಕ್ಷದ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಜರುಗಿತು. ನಂತರ ಎರಡು ಪಕ್ಷದ ಹಿರಿಯ ಮುಖಂಡರುಗಳು ಕಾರ್ಯಕರ್ತರನ್ನು ಸಮಾಧಾನಪಡಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.
ಬಿಗುವಿನ ವಾತಾವರಣದಿಂದ ಟ್ರಾಫಿಕ್ ಜಾಮ್ ಉಂಟಾಗಿದ್ದರಿಂದ ಪೊಲೀಸರು ರಸ್ತೆ ಸಂಚಾರ ಸುಗಮಗೊಳಿಸಲು ಸಾಕಷ್ಟು ಪರದಾಡಿದರು.