ನಮ್ಮ ದೇಶಕ್ಕೆ ಅವಮಾನ ಮಾಡೋದೇ ಕಾಂಗ್ರೆಸ್‌ನ ಬಹುದೊಡ್ಡ ಗುಣ: ಸಿಎಂ ಯಾದವ್‌ ಕಿಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚುನಾವಣಾ ಆಯೋಗದ ಕುರಿತು ಅಮೆರಿಕದಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ನೀಡಿರುವ ಹೇಳಿಕೆಯಿಂದ ದೇಶಕ್ಕೆ ಅವಮಾನವಾಗಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್‌ ಯಾದವ್‌ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಹುಲ್‌ ಗಾಂಧಿ ಅವರು ವಿದೇಶಿ ನೆಲದಲ್ಲಿ ದೇಶದ ಮಾನ ಹಾಳು ಮಾಡಿದ್ದಾರೆ. ಬೇರೆ ಯಾವುದೇ ದೇಶದ ನಾಯಕರು ತಮ್ಮ ದೇಶದ ಕುರಿತು ವಿದೇಶಿ ನೆಲದಲ್ಲಿ ಅವಮಾನವಾಗುವಂತೆ ವಾತಾವರಣವನ್ನು ಸೃಷ್ಟಿಸುವುದಿಲ್ಲ. ಇದು ಕಾಂಗ್ರೆಸ್‌ನ ಗುಣವಾಗಿದೆ ಎಂದು ಕಿಡಿ ಕಾರಿದರು.

ಕಳೆದ ಬಾರಿಯು ಅವರು ಹೀಗೆ ಮಾಡಿದ್ದರು. ಈ ಬಾರಿ ಅವರು ದೇಶಕ್ಕೆ ಅವಮಾನ ಮಾಡಿದ್ದಾರೆ, ಭಗವಾನ್‌ ಮಹಾಕಾಲ್ ಅವರಿಗೆ ಸರಿಯಾದ ಬುದ್ಧಿ ನೀಡಲಿ ಎಂದರು.

ಅಮೆರಿಕದ ಬೋಸ್ಟನ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿರಾಹುಲ್ ಗಾಂಧಿ, ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯನ್ನು ಉಲ್ಲೇಖಿಸಿ ಚುನಾವಣಾ ಆಯೋಗವು ನಿಯಮಗಳಲ್ಲಿ ರಾಜಿ ಮಾಡಿಕೊಂಡಿದೆ ಮತ್ತು ವ್ಯವಸ್ಥೆಯಲ್ಲಿ ಏನೋ ತಪ್ಪಾಗಿದೆ ಎಂದು ಆರೋಪಿಸಿದ್ದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!