ಕೋಲಾರದಲ್ಲಿ ಕಾಂಗ್ರೆಸ್ ನ ‘ಪ್ರಜಾಧ್ವನಿ 2.O’ ಪ್ರಚಾರಕ್ಕೆ ಸಿಕ್ಕಿತು ಚಾಲನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೋಲಾರದಲ್ಲಿ ಇಂದು ಕಾಂಗ್ರೆಸ್ ಚುನಾವಣಾ ರಣಕಹಳೆ ಮೊಳಗಿಸಿದ್ದು, ‘ಪ್ರಜಾಧ್ವನಿ 2.O’ ಪ್ರಚಾರಕ್ಕೆ ಚಾಲನೆ ನೀಡಿದೆ.

ಕೋಲಾರದ ಮುಳಬಾಗಿಲು ತಾಲೂಕಿನ ಕುರುಡುಮಲೆ ವಿನಾಯಕ ದೇವಸ್ಥಾನದಿಂದ ಪ್ರಚಾರಕ್ಕೆ ಅಧಿಕೃತ ಜಾಲನೆ ಸಿಕ್ಕಿದೆ. ಕೋಲಾರದ ಮುಳಬಾಗಿಲು ಬಳಿ ಇರೋ ಕುರುಡುಮಲೆ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಚಾಲನೆ ನೀಡಲಾಗಿದ್ದು , ನಂತರ ಭರ್ಜರಿ ರೋಡ್ ಶೋ ನಡೆಸಲಾಗಿದೆ.

ತೆರೆದ ವಾಹನದಲ್ಲಿ ಅಂಬೇಡ್ಕರ್ ವೃತ್ತದಿಂದ ಸೌಂದರ್ಯ ಸರ್ಕಲ್ವರೆಗೆ ಭರ್ಜರಿ ರೋಡ್ ಶೋ ನಡೆಸಿದ ಸಿದ್ದರಾಮಯ್ಯ ಹಾಗೂ ಡಿಕೆ, ಶಿವಕುಮಾರ್ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಪರ ಮತಯಾಚಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!