ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಕಾಂಗ್ರೆಸ್ ನ ಪ್ರಮುಖ ನಾಯಕರಲ್ಲಿ ಒಬ್ಬರಾದ ರತಂಜಿತ್ ಪ್ರತಾಪ್ ನರೇನ್ ಸಿಂಗ್ (ಆರ್ ಪಿಎನ್ ಸಿಂಗ್) ಅವರು ಇಂದು ಪಕ್ಷ ತೊರೆದಿದ್ದಾರೆ.
ವಿಧಾನಸಭಾ ಚುನಾವಣೆಗೆ ಕೆಲವು ದಿನಗಳು ಬಾಕಿ ಇರುವ ಸಮಯದಲ್ಲಿ ಕಾಂಗ್ರೆಸ್ ನಾಯಕ ಪಕ್ಷ ತೊರೆದಿರುವುದು ಕೈ ಪಾಳಯಕ್ಕೆ ಭಾರೀ ಹೊಡೆತ ಬಿದ್ದಂತಾಗಿದೆ.
ಈ ಬಗ್ಗೆ ಸ್ವತಃ ಆರ್ ಪಿಎನ್ ಸಿಂಗ್ ಅವರೇ ಟ್ವೀಟ್ ಮಾಡುವ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರ ನೀಡಿರುವುದನ್ನು ಖಚಿತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ನನ್ನ ರಾಜಕೀಯದ ಹೊಸ ಆರಂಭ ಮಾಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಉತ್ತರ ಪ್ರದೇಶದಲ್ಲಿ ಈಗಾಗಲೇ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಪಡ್ರೌನ ಕ್ಷೇತ್ರದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ.
This is a new beginning for me and I look forward to my contribution to nation building under the visionary leadership & guidance of the Honourable Prime Minister Shri @narendramodi, BJP President Shri @JPNadda ji & Honourable Home Minister @AmitShah ji.
— RPN Singh (@SinghRPN) January 25, 2022