ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಿಸಿಎಂ ಡಿಕೆ ಶಿವಕುಮಾರ್ ಕರ್ನಾಟಕ ಕಾಂಗ್ರೆಸ್ನಲ್ಲಿ ಸಂಘಟನಾ ಮಂತ್ರವನ್ನೇ ಜಪಿಸಿಕೊಂಡು ಬರುತ್ತಿರುವ ಪ್ರಭಾವಿ ನಾಯಕ. ಬಿಜೆಪಿಯ ಭದ್ರಕೋಟೆ ಎನ್ನಲಾದ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕರಾವಳಿ ಕರ್ನಾಟಕದಲ್ಲಿ ಕಾಂಗ್ರೆಸ್ನ ಟ್ರಬಲ್ ಶೂಟರ್ ಓಡಾಟ ಇದೀಗ ಹೆಚ್ಚಾಗಿದೆ.
ಡಿಕೆ ಶಿವಕುಮಾರ್ ಬಿಜೆಪಿ ಕೋಟೆಯನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳಲೇಬೇಕು ಎಂದು ಪಣ ತೊಟ್ಟಿದ್ದಾರೆ. ಸಾಫ್ಟ್ ಹಿಂದುತ್ವದ ಮೂಲಕ ಕರಾವಳಿಯಲ್ಲಿ ಸಂಘಟನಾ ಸೂತ್ರ ಹೆಣೆದಿದ್ದಾರೆ. ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಪಕ್ಷ ಬಲವರ್ಧನೆಗೆ ಒತ್ತು ನೀಡಿರುವ ಅವರು, ಕಾಂಗ್ರೆಸ್ ನಾಯಕರಗೆ ಪಕ್ಷ ಬಲವರ್ಧನೆ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಲು ಡಿಕೆಶಿ ಸೂಚನೆ ಕೊಟ್ಟಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ 2 ಕ್ಷೇತ್ರ ಬಿಟ್ಟು, ಉಳಿದ 6 ಕಡೆ ಕೇಸರಿ ಪತಾಕೆಯೇ ಹಾರುತ್ತಿದೆ. ಉಡುಪಿಯ 5 ವಿಧಾನಸಭಾ ಕ್ಷೇತ್ರಗಳು ಬಿಜೆಪಿ ಮುಷ್ಟಿಯಲ್ಲಿವೆ.