Monday, November 24, 2025

ಬೆಂಗಳೂರು ಹಾಡಹಗಲೇ ದರೋಡೆಗೆ ಸಾಥ್: ಕಾನ್ಸ್​ಟೇಬಲ್​ ಸಸ್ಪೆಂಡ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ನಗರದಲ್ಲಿ ಹಾಡಹಗಲೇ ನಡೆದಿದ್ದ 7.11 ಕೋಟಿ ರೂ. ಹಣ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಗೋವಿಂದಪುರ ಠಾಣೆ ಪೊಲೀಸ್​ ಕಾನ್ಸ್​ಟೇಬಲ್​ ಅಣ್ಣಪ್ಪ ನಾಯ್ಕ್​​ ಅನ್ನು ಸಸ್ಪೆಂಡ್​ ಮಾಡಿ ಪೂರ್ವ ವಿಭಾಗದ ಡಿಸಿಪಿ ಬಿ.ದೇವರಾಜ್​ರಿಂದ ಆದೇಶ ಹೊರಡಿಸಲಾಗಿದೆ.

ಇನ್ನು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬೆಂಗಳೂರು ಕಮಿನಷರ್​ ಸೀಮಂತ್​ ಕುಮಾರ್, ಆಯಾ ಠಾಣೆಗಳಲ್ಲಿ ಎಲ್ಲರನ್ನ ಖುದ್ದು ವಿಚಾರಣೆ ಮಾಡಿ ರಿಪೋರ್ಟ್​ ನೀಡುವಂತೆ ಆಯಾ ವಿಭಾಗದ ಡಿಸಿಪಿ ಮತ್ತು ಎಸಿಪಿಗಳಿಗೆ ಸೂಚಿಸಿದ್ದಾರೆ.

ಹಾಡಹಗಲೇ ಹಣ ಲೂಟಿ ಹೊಡೆಯಲು ಗೋವಿಂದಪುರ ಠಾಣೆ ಪೊಲೀಸ್ ಕಾನ್ಸ್​ಟೇಬಲ್ ಅಣ್ಣಪ್ಪ ಸಾಥ್ ನೀಡಿದ್ದ. ಈ ಅಣ್ಣಪ್ಪ ನಾಯ್ಕ್ ಇಡೀ ದರೋಡೆಯ ಮಾಸ್ಟರ್‌ಮೈಂಡ್ ಎನ್ನಲಾಗಿದೆ. ಇತನೇ ಹುಡುಗರನ್ನ ದರೋಡೆಗೆ ಸಿದ್ಧಪಡಿಸಿದ್ದ ಎಂಬ ವಿಚಾರವು ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತು ಮಾಡಲಾಗಿದೆ.

error: Content is protected !!