ಕುಡಿದ ಅಮಲಿನಲ್ಲಿ ಪತಿಯಿಂದ ಪತ್ನಿಗೆ ನಿತ್ಯ ಹಿಂಸೆ: ಪೊಲೀಸ್‌ ಠಾಣೆ ಮೆಟ್ಟಿಲೇರಿದ 7 ವರ್ಷದ ಮಗ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕುಡಿತಕ್ಕೆ ದಾಸನಾಗಿ ಹೆಂಡತಿ ಮಕ್ಕಳಿಗೆ ಬಡಿಯುತ್ತಿದ್ದ ತಂದೆಯ ವಿರುದ್ಧ ಏಳು ವರ್ಷದ ಬಾಲಕನೋರ್ವ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾನೆ.

ತೆಲಂಗಾಣದ ರಾಜಣ್ಣ ಶ್ರೀಸಿಲ್ಲಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಮೂರನೇ ತರಗತಿಯಲ್ಲಿ ಓದುತ್ತಿರುವ ಏಳು ವರ್ಷದ ಬಾಲಕ ಸಮೀಪದ ಪೊಲೀಸ್‌ ಠಾಣೆಯಲ್ಲಿ ತಂದೆಯ ವಿರುದ್ಧ ದೂರು ನೀಡಿದ್ದಾನೆ.
ತೆಲಂಗಾಣದ ಶ್ರೀ ಸಿಲ್ಲಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಮುಸ್ತಾಬಾದ್ ನಿವಾಸಿ ಬಾಲಕೃಷ್ಣ ಎಂಬಾತ ವಿಪರೀತ ಮದ್ಯ ಸೇವನೆ ಮಾಡುತ್ತಿದ್ದ.

ಮುಸ್ತಾಬಾದ್ ನಿವಾಸಿಯಾದ ಬಾಲಕೃಷ್ಣ ಕುಡಿತಕ್ಕೆ ದಾಸನಾಗಿದ್ದ ಈತನಿಗೆ ಭರತ್ ಹಾಗೂ ಶಿವಾನಿ ಹೆಸರಿನ ಇಬ್ಬರು ಮಕ್ಕಳಿದ್ದು, ಭರತ್ ಮುಸ್ತಾಬಾದ್‌ನ ಶಾಲೆಯೊಂದರಲ್ಲಿ ಮೂರನೇ ತರಗತಿಯಲ್ಲಿ ಓದುತ್ತಿದ್ದ. ಇತ್ತ ಕುಡಿತಕ್ಕೆ ದಾಸನಾಗಿದ್ದ ತಂದೆ ಬಾಲಕೃಷ್ಣ ಮಕ್ಕಳೆದುರೇ ದಿನವೂ ಮಕ್ಕಳ ತಾಯಿ ಹಾಗೂ ತನ್ನ ಪತ್ನಿಗೆ ದೈಹಿಕವಾಗಿ ಹಲ್ಲೆ ನಡೆಸುತ್ತಿದ್ದ. ತಂದೆಯ ಕೈಯಲ್ಲಿ ಅಮ್ಮ ದೌರ್ಜನ್ಯಕ್ಕೊಳಗಾಗುತ್ತಿದ್ದಿದ್ದನ್ನು ಸಹಿಸದ ಪುತ್ರ ಒಂದು ದಿನ ಯಾರಿಗೂ ಹೇಳದೆ ಕೇಳದೆ ಸಮೀಪದ ಪೊಲೀಸ್ ಠಾಣೆಗೆ ತೆರಳಿ ತನ್ನ ಮುಗ್ಧ ಭಾಷೆಯಲ್ಲಿ ಇರುವ ವಿಷಯವನ್ನೆಲ್ಲ ಹೇಳಿದ್ದಾನೆ.

ಠಾಣೆಯ ಸಬ್ ಇನ್ಸ್ಪೆಕ್ಟರ್ ವೆಂಕಟೇಶ್ವರಲು ಬಾಲಕನ ಕಥೆಯನ್ನೆಲ್ಲಾ ತಾಳ್ಮೆಯಿಂದ ಕೇಳಿಸಿಕೊಂಡು ಆತನ ತಂದೆ ಬಾಲಕೃಷ್ಣನನ್ನು ಠಾಣೆಗೆ ಕರೆಸಿಕೊಂಡಿದ್ದಾರೆ. ಇನ್ನೊಮ್ಮೆ ಈ ರೀತಿ ಮಾಡಿದರೆ ಕೇಸ್ ದಾಖಲಿಸಿ ಜೈಲಿಗೆ ಕಳುಹಿಸುವುದಾಗಿ ಹೇಳಿದ್ದು, ಇದೀಗ ತನ್ನ ತಪ್ಪೊಪ್ಪಿಕೊಂಡಿರುವ ಬಾಲಕೃಷ್ಣ ಒಳ್ಳೆ ರೀತಿಯಲ್ಲಿ ಇರುವುದಾಗಿ ಹೇಳಿದ್ದಾನಂತೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!