ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿನ್ನೆ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಸೋಲನ್ನನುಭವಿಸಿದೆ. ಈ ನಿಟ್ಟಿನಲ್ಲಿ ಇಂದು ರಾಜ್ಯದ ಬಿಜೆಪಿ ನೂತನ ಶಾಸಕರ ಸಭೆಯು ಇಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾತುಕತೆ ನಡೆಸಲಾಯಿತು.
ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಶೀಘ್ರದಲ್ಲಿ ರಾಜ್ಯ ಮಟ್ಟದಲ್ಲಿ ಹಾಗೂ ಕ್ಷೇತ್ರವಾರು ಪರಾಮರ್ಶೆ ಸಭೆಗಳನ್ನು ನಡೆಸಲಿದ್ದೇವೆ. ಸ್ಪರ್ಧಿಸಿದ ಎಲ್ಲ ಅಭ್ಯರ್ಥಿಗಳ ಕ್ಷೇತ್ರವಾರು ಸಭೆಯನ್ನು ನಡೆಸಿ ಸೋಲಿನ ಪರಾಮರ್ಶೆ ಮಾಡಲಾಗುವುದು ಎಂದು ತಿಳಿಸಿದರು. ಕಾರ್ಯಕರ್ತರು ಸೋಲಿನ ಪರಾಮರ್ಶೆ ಜೊತೆಗೆ ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗೆ ಸನ್ನದ್ಧರಾಗಬೇಕು ಎಂದು ಮನವಿ ಮಾಡಿದರು.
ವಿಶ್ವವಂದ್ಯ ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ ಅತಿ ಹೆಚ್ಚು ಸಂಸದರ ಬೆಂಬಲದೊಂದಿಗೆ ಪ್ರಧಾನಿಯಾಗಲು 2024ರ ಚುನಾವಣೆಯಲ್ಲಿ ಹಗಲಿರುಳಿನ್ನದೆ ದುಡಿಯಬೇಕು ಎಂದು ಮನವಿ ಮಾಡಿದರು ಶೀಘ್ರವೇ ಶಾಸಕಾಂಗ ಪಕ್ಷದ ಸಭೆ ಕರೆದು ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ನಿರ್ಧರಿಸಲಾಗಿದೆ ಎಂದು ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.