ʻಸಂವಿಧಾನ ಹತ್ಯೆ ದಿವಸ್’ ಆಚರಣೆ ಪ್ರತಿಯೊಬ್ಬ ಭಾರತೀಯನ ಸ್ವಾತಂತ್ರ್ಯ, ಪ್ರಜಾಪ್ರಭುತ್ವದ ರಕ್ಷಣೆಗೆ ಸಹಾಯ: ಅಮಿತ್‌ ಶಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೋದಿ ಸರ್ಕಾರ ಈ ದಿನವನ್ನು ‘ಸಂವಿಧಾನ ಹತ್ಯೆ ದಿವಸ್’ ಎಂದು ಆಚರಿಸುತ್ತಿದೆ. ಈ ಮೂಲಕ ತುರ್ತು ಪರಿಸ್ಥಿತಿಯ ಕರಾಳತೆಯ ಬಗ್ಗೆ ದೇಶದ ಯುವ ಪೀಳಿಗೆಗೆ ಅರಿವು ಮೂಡಿಸಲಾಗುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿಳಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು , ಇಂದಿರಾ ಗಾಂಧಿ ಸರ್ಕಾರ ತುರ್ತು ಪರಿಸ್ಥಿತಿ ಹೇರಿ ಇಂದಿಗೆ 50 ವರ್ಷ ಕಳೆದಿದೆ. ಆಳುವವರು ಸರ್ವಾಧಿಕಾರಿಗಳಾದಾಗ, ಅವರನ್ನು ಉರುಳಿಸುವ ಶಕ್ತಿಯನ್ನು ಜನರು ಹೊಂದಿರುತ್ತಾರೆ ಎಂಬುದನ್ನು ಈ ದಿನ ನೆನಪಿಸುತ್ತದೆ ಎಂದು ಬರೆದುಕೊಂಡಿದ್ದಾರೆ.

ತುರ್ತು ಪರಿಸ್ಥಿತಿ ಸಮಯದಲ್ಲಿ ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕಲಾಯಿತು. ನ್ಯಾಯಾಂಗದ ಕೈಗಳನ್ನು ಕಟ್ಟಿ ಹಾಕಲಾಯಿತು. ಸಾಮಾಜಿಕ ಕಾರ್ಯಕರ್ತರನ್ನು ಜೈಲಿಗೆ ಹಾಕಲಾಯಿತು. ಈ ಸಮಯದಲ್ಲಿ ದೇಶದ ಜನ ಇಂದಿರಾ ಗಾಂಧಿಯವರ ವಿರುದ್ಧ ಅಧಿಕಾರ ತ್ಯಜಿಸುವಂತೆ ಧ್ವನಿ ಎತ್ತಿದರು. ಸರ್ವಾಧಿಕಾರಿ ಕಾಂಗ್ರೆಸ್‌ನ್ನು ಬೇರುಸಹಿತ ಕಿತ್ತುಹಾಕಿದರು. ಈ ಹೋರಾಟದಲ್ಲಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಎಲ್ಲಾ ವೀರರಿಗೆ ನಾನು ಗೌರವ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

https://x.com/AmitShah/status/1937707143874130330?ref_src=twsrc%5Etfw%7Ctwcamp%5Etweetembed%7Ctwterm%5E1937707143874130330%7Ctwgr%5E9da6e01743872b727f01915f5456e0553b90441c%7Ctwcon%5Es1_&ref_url=https%3A%2F%2Fpublictv.in%2Femergency-was-reflection-of-congress-anti-democratic-mentality-amit-shah%2F

ʻಸಂವಿಧಾನ ಹತ್ಯೆ ದಿವಸ್’ ಆಚರಣೆ ಪ್ರತಿಯೊಬ್ಬ ಭಾರತೀಯನಲ್ಲೂ ವೈಯಕ್ತಿಕ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವದ ರಕ್ಷಣೆಯ ಬಗೆಗಿನ ಚಿಂತನೆಗಳನ್ನು ಜೀವಂತವಾಗಿಡಲು ಸಹಾಯ ಮಾಡುತ್ತದೆ. ಅಲ್ಲದೇ ಕಾಂಗ್ರೆಸ್‌ನಂತಹ ಸರ್ವಾಧಿಕಾರಿ ಶಕ್ತಿಗಳ ಭಯಾನಕತೆಯನ್ನು ತಡೆಯಲು ಸಹಾಯ ಮಾಡುತ್ತದೆ ಎಂದು ಅವರು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!