ಕೆಐಎಡಿಬಿ ಭೂ ಸ್ವಾಧೀನಪಡಿಸಿಕೊಂಡ ಜಾಗದಲ್ಲಿ ಆಸ್ಪತ್ರೆ, ಶಾಲೆ, ವಸತಿ ನಿರ್ಮಾಣ: ಸಚಿವ ನಿರಾಣಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಬೆಂಗಳೂರು: ಕೆ.ಐ.ಎ.ಡಿ.ಬಿ ಭೂ ಸ್ವಾಧೀನ ಮಾಡಿಕೊಳ್ಳುವ ಜಾಗದಲ್ಲಿ ಶೇ.15 ರಷ್ಟು ಭೂಮಿಯನ್ನು ಆಸ್ಪತ್ರೆ, ಶಾಲೆ, ವಸತಿಸೇರಿದಂತೆ ಇನ್ನಿತರೆ ಮೂಲ ಸೌಕರ್ಯಕ್ಕೆ ಬಳಸಲಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕ ಸಚಿವ ಮುರುಗೇಶ್ ಆರ್ ನಿರಾಣಿ ಅವರು ಹೇಳಿದ್ದಾರೆ.

ಮಂಗಳವಾರ ವಿಧಾನಪರಿಷತ್ ನಲ್ಲಿ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೈಗಾರಿಕಾದ್ಯಮಿಗಳಿಗೆ ಭೂಮಿ ಹಂಚಿಕೆ ಮಾಡುವಾಗ ಉದ್ಯಮ ಹಾಗೂ ಕೈಗಾರಿಕೆಗಳಲ್ಲಿ ಕೆಲಸ ಮಾಡುವವರು ಹತ್ತಿರದಲ್ಲೇ ವಾಸ ಮಾಡಲು ಅಗತ್ಯವಾದ ವಸತಿ ನಿರ್ಮಿಸಲು, ಜೊತೆಗೆ ಆಸ್ಪತ್ರೆ, ಶಿಕ್ಷಣ ಸಂಸ್ಥೆ ಸೇರಿ ಇತರ ಸೌಲಭ್ಯಗಳನ್ನು ಕಲ್ಪಿಸಲು ಮಂಜೂರಾದ ಭೂಮಿಯಲ್ಲಿ ಶೇ.15ರಷ್ಟು ಬಳಕೆ ಮಾಡಿಕೊಳ್ಳಲು ಅವಕಾಶವಿದೆ ಎಂದು ತಿಳಿಸಿದರು.

ಹಾಗೆಯೆ ಬ್ರಿಗೇಡ್ ಸಂಸ್ಥೆಗೆ ತಲಾ 25 ಎಕರೆಯಂತೆ ಎರಡು ಬಾರಿಭೂಮಿ ನೀಡಲಾಗಿದೆ. 2002ರಲ್ಲಿ ಭೂಮಿ ನೀಡಲಾಗಿತ್ತು. ಅದರಲ್ಲಿಶೇ.15ರಷ್ಟು ಭೂಮಿಯನ್ನು ವಸತಿ, ಆಸ್ಪತ್ರೆ, ಶಾಲೆ ಕಟ್ಟಲು ಬಳಕೆಮಾಡಿಕೊಳ್ಳುತ್ತಿದ್ದು, 11 ಟವರ್ ನಿರ್ಮಿಸುವ ಗುರಿ ಇದೆ. ಈಗಾಗಲೇ ಏಳು ಟವರ್ ನಿರ್ಮಿಸಲಾಗಿದೆ. ಬಾಕಿ ನಿರ್ಮಾಣ ಕಾಮಗಾರಿನಡೆಯುತ್ತಿದೆ. ಆ ಭೂಮಿಯಲ್ಲಿ ಬಡವರಿಗೆ ಮನೆ ನಿರ್ಮಿಸಿಕೊಡಲಾಗುವುದು ಎಂದು ತಿಳಿಸಿದರು.

ಇನ್ನು ಕೌಶಲ್ಯ ಅಭಿವೃದ್ಧಿಗೆ ಖಾಸಗಿ ಸಹಭಾಗಿತ್ವದಲ್ಲಿ ಬ್ರಿಗೇಡ್ ಗ್ರೂಪ್ ಗೆ ಭೂಮಿ ನೀಡಲಾಗಿದ್ದು, ಅದಕ್ಕೆ ಸರಕಾರ ಹಣವನ್ನು ಕೂಡ ಪಡೆದಿದ್ದು, ಉಚಿತವಾಗಿ ನೀಡಿಲ್ಲ. ಹೀಗಾಗಿ ಇಲ್ಲಿ ಯಾವುದೇ ನಿಯಮ ಉಲ್ಲಂಘನೆಯಾಗಿಲ್ಲಎಂದು ನಿರಾಣಿ ಸ್ಪಷ್ಟಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!