ಹೊಸದಿಗಂತ ವರದಿ, ವಿಜಯಪುರ:
ಕಂಟೇನರ್ ವಾಹನ ಹಾಗೂ ಬೈಕ್ ಡಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವಿಗೀಡಾದ ಘಟನೆ ನಗರ ಹೊರ ವಲಯ ತೊರವಿ ರಸ್ತೆಯ ಡೋಣಿ ಸೇತುವೆ ಬಳಿ ಬುಧವಾರ ನಡೆದಿದೆ.
ಮೃತರನ್ನು ರತ್ನಾಪುರದ ಕಲ್ಲಪ್ಪ ಕೇರುಬಾ ಕಟೆ (65) ಎಂದು ಗುರುತಿಸಲಾಗಿದೆ.
ವೃದ್ಧ ಕಲ್ಲಪ್ಪ ಕಟೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಅಸುನೀಗಿದ್ದಾನೆ.
ಗ್ರಾಮೀಣ ಪೊಲೀಸ್ ಠಾಣೆ ಪಿಎಸ್’ಐ ಜಿ.ಎಸ್. ಉಪ್ಪಾರ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ.
ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.