ರಾಜ್ಯದಾದ್ಯಂತ ಹಲವೆಡೆ ಬಿಸಿಲು, ಮಳೆ, ಮೋಡದ ವಾತಾವರಣ ಮುಂದುವರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯದಾದ್ಯಂತ ಹಲವೆಡೆ ಬಿಸಿಲು, ಮಳೆ, ಮೋಡದ ವಾತಾವರಣ ಮುಂದುವರಿದಿದೆ. ಏ.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯಂತೆ ಕೊಡಗು ಜಿಲ್ಲೆಯ ಸೋಮವಾರಪೇಟೆ, ಮೂಡಿಗೆರೆ, ಆಗುಂಬೆ, ಶೃಂಗೇರಿ, ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಒಂದೆರಡು ಭಾಗಗಳಲ್ಲಿ ಸಾಧಾರಣ ಮಳೆ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ ಒಂದೆರಡು ಮಳೆಯ ಸಾಧ್ಯತೆ ಇದೆ.

ಇನ್ನು ರಾಜ್ಯದ‌ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!