ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೋಮವಾರ ಮಧ್ಯರಾತ್ರಿಯಿಂದಲೇ ಆರಂಭವಾಗಿರುವ ಲಾರಿ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಅಗತ್ಯ ವಸ್ತುಗಳ ಪೂರೈಕೆಯ ಮೇಲೆ ಪರಿಣಾಮ ಬೀರಿದೆ. ಅಲ್ಲದೆ, ಬೆಲೆ ಏರಿಕೆ ಬಿಸಿ ಕೂಡ ಜನರಿಗೆ ತಟ್ಟಲು ಶುರುವಾಗಿದೆ.
ರಾಜ್ಯದ ವಿವಿಧ ಭಾಗಗಳಿಂದ ಪ್ರತಿದಿನ ಸುಮಾರು 300 ಟ್ರಕ್ಲೋಡ್ ಈರುಳ್ಳಿಯನ್ನು ಸಾಗಣೆಯಾಗುತ್ತಿತ್ತು. ಆದರೆ, ಬೆಂಗಳೂರಿನ ಯಶವಂತಪುರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮಾರುಕಟ್ಟೆಗೆ ಮಂಗಳವಾರ ಕೇವಲ 190 ಟ್ರಕ್ಗಳಷ್ಟೇ ಬಂದಿವೆ.
ಏಪ್ರಿಲ್ 15 ರಂದು 56,738 ಈರುಳ್ಳಿ ಮೂಟೆದಶು ಬಂದಿದ್ದರೆ, ಏಪ್ರಿಲ್ 16 ರಂದು ಈ ಸಂಖ್ಯೆ 38,669 ಕ್ಕೆ ಇಳಿದಿದೆ. ಮುಂಬರುವ ದಿನಗಳಲ್ಲಿ ಈ ಸಂಖ್ಯೆಗಳು ಮತ್ತಷ್ಟು ಇಳಿಕೆಯಾಗುವ ಸಾಧ್ಯತೆಗಳಿವೆ ಮಾರುಕಟ್ಟೆಯಲ್ಲಿನ ದಾಸ್ತಾನು ಗರಿಷ್ಠ ಮೂರು ದಿನಗಳವರೆಗೆ ಮಾತ್ರ ಇರುತ್ತದೆ ಹೀಗಾಗಿ ಬೆಲೆಯೂ ಹೆಚ್ಚಾಗುವ ಸಾಧ್ಯತೆ ಇದೆ.