ಎಸ್‌ಐಟಿಯಿಂದ ಸತತ ವಿಚಾರಣೆ, ರೇವಣ್ಣ ಆರೋಗ್ಯದಲ್ಲಿ ಏರುಪೇರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಂತ್ರಸ್ತೆಯ ಕಿಡ್ನಾಪ್ ಕೇಸ್‌ನಲ್ಲಿ ಹೆಚ್‌.ಡಿ. ರೇವಣ್ಣ ಎಸ್‌ಐಟಿ ಅಧಿಕಾರಿಗಳ ಕೈಗೆ ಸಿಕ್ಕಿದ್ದು, ತೀವ್ರ ವಿಚಾರಣೆ ನಡೆಯುತ್ತಿದೆ. ನಾಲ್ಕು ದಿನಗಳಿಂದ ವಿಚಾರಣೆ ಎದುರಿಸುತ್ತಿರುವ ರೇವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಎಸ್‌ಐಟಿ ಬಂಧಿಸಿದ ಬಳಿಕ ಹೆಚ್‌.ಡಿ ರೇವಣ್ಣ ಸರಿಯಾಗಿ ಊಟ ಮಾಡಿಲ್ಲ. ಇದರಿಂದಾಗಿ ಆ್ಯಸಿಡಿಟಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆ್ಯಸಿಡಿಟಿ ಸಮಸ್ಯೆಯಿಂದ ಹೊಟ್ಟೆ ಉರಿ ಹಾಗೂ ಹೊಟ್ಟೆ ನೋವು ಕಾಣಿಸಿಕೊಂಡು, ಆರೋಗ್ಯದಲ್ಲಿ ಏರುಪೇರಾಗಿತ್ತು. ಇದರ ಬೆನ್ನಲ್ಲೇ ರೇವಣ್ಣನನ್ನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯ್ತು. ಸುಮಾರು 2 ಗಂಟೆಗಳ ಕಾಲ ತಜ್ಞ ವೈದ್ಯರು ರೇವಣ್ಣಗೆ ಚಿಕಿತ್ಸೆಯನ್ನ ನೀಡಿದ್ರು..ಬಳಿಕ ವಿಕ್ಟೋರಿಯಾ ಆಸ್ಪತ್ರೆಯಿಂದ ಮತ್ತೆ ಎಸ್‌ಐಟಿ ಕಚೇರಿಗೆ ಕರೆದೊಯ್ಯಲಾಯ್ತು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!