ಗುತ್ತಿಗೆ ಲಂಚ ಪ್ರಕರಣ: ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್‌ಐಆರ್ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಬಿಡಿಎ ವಸತಿ ಯೋಜನೆಯ ಗುತ್ತಿಗೆ ನೀಡುವ ಸಲುವಾಗಿ ಲಂಚ ಪ್ರಕರಣ ಆರೋಪದಲ್ಲಿ ಬೆಂಗಳೂರು ನಗರ ಲೋಕಾಯುಕ್ತ ಠಾಣೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಮೇಲೆ ಎಫ್‌ಐಆರ್ ದಾಖಲಾಗಿದೆ.
ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಾಹಂ ಅವರು ರಾಮಲಿಂಗಂ ಕನ್ಸ್ ಟ್ರಕ್ಷನ್ ಕಂಪನಿಗೆ ಬಿಡಿಎಯಿಂದ ವಸತಿ ಯೋಜನೆಗೆ ಸಂಬಂಧಿಸಿದಂತೆ ಅನುಮತಿ ನೀಡುವಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ವಿಶೇಷ ನ್ಯಾಯಾಲಯಕ್ಕೆ ದೂರು ದಾಖಲಿಸಿದ್ದರು.

ಈ ಪ್ರಕರಣದಲ್ಲಿ ವಿಶೇಷ ನ್ಯಾಯಾಲಯ ಲೋಕಾಯುಕ್ತ ಪೊಲೀಸರಿಗೆ ತನಿಖೆ ನಡೆಸುವಂತೆ ಆದೇಶ ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ಇಂದು ಲೋಕಾಯುಕ್ತ ಪೊಲೀಸರು ಬಿಎಸ್ ಯಡಿಯೂರಪ್ಪ, ಪುತ್ರ ಬಿ.ವೈ ವಿಜಯೇಂದ್ರ, ಶಶಿಧರ್ ಮರಡಿ, ಸಂಜಯ್, ಚಂದ್ರಕಾಂತ್, ರಾಮಲಿಂಗಂ, ಸಹಾಕರ ಸಚಿವ ಎಸ್ ಟಿ ಸೋಮಶೇಖರ್, ಜಿ ಸಿ ಪ್ರಕಾಶ್, ಕೆ ರವಿ, ವಿರೂಪಾಕ್ಷಪ್ಪ ಯಮಕನಮರಡಿ ವಿರುದ್ಧ ಪಿಸಿ ಆಕ್ಟ್ 7, 8, 9, 10, 13 ಮತ್ತು ಐಪಿಸಿ ಸೆಕ್ಷನ್ 383, 384, 415, 420, ಸೆಕ್ಷನ್ 34 ಹಾಗೂ 120ಬಿ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!