ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಗುತ್ತಿಗೆದಾರ ಶವವಾಗಿ ಪತ್ತೆ: ಕೊಲೆ ಶಂಕೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಗುತ್ತಿಗೆದಾರನ ಶವ ಕಾವೇರಿ ನದಿಯಲ್ಲಿ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಆತಂಕ ಮೂಡಿಸಿದೆ. ಹುಣಸನಹಳ್ಳಿ ಗ್ರಾಮದ 28 ವರ್ಷದ ಪವನ್ ಎಂಬ ಯುವಕ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವುದು ಕುಟುಂಬಸ್ಥರು ಮತ್ತು ಸ್ಥಳೀಯರಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಪವನ್ ಕೋಟ್ಯಂತರ ರೂಪಾಯಿ ಮೌಲ್ಯದ ವಿದ್ಯುತ್ ಕಾಮಗಾರಿಗಳನ್ನು ನಿರ್ವಹಿಸುತ್ತಿದ್ದ ಗುತ್ತಿಗೆದಾರರಾಗಿದ್ದರು. ಏಪ್ರಿಲ್ 2ರಂದು ಕೆಲಸದ ಸ್ಥಳಕ್ಕೆ ಹೋಗುತ್ತೇನೆ ಎಂದು ಮನೆಯಿಂದ ಹೊರಟ ಅವರು ಬಳಿಕ ಮನೆಗೆ ಮರಳಿರಲಿಲ್ಲ. … Continue reading ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಗುತ್ತಿಗೆದಾರ ಶವವಾಗಿ ಪತ್ತೆ: ಕೊಲೆ ಶಂಕೆ
Copy and paste this URL into your WordPress site to embed
Copy and paste this code into your site to embed