ಗಡಿಯಲ್ಲಿ ನುಸುಳುವಿಕೆ ಮೇಲೆ ನಿಯಂತ್ರಣ ಸಾಧಿಸಿದರೆ ಬಂಗಾಳದಲ್ಲಿ ಶಾಂತಿ ನೆಲಸಲು ಸಾಧ್ಯ:ಅಮಿತ್ ಶಾ

ಹೊಸ ದಿಗಂತ ಡಿಜಿಟಲ್ ಡೆಸ್ಕ್: 

ರವೀಂದ್ರ ಸಂಗೀತ ಕೇಳುವ ಬದಲಿಗೆ ಬಂಗಾಳದಲ್ಲಿಂದು ಬಾಂಬ್‌ಗಳ ಸದ್ದು ಕೇಳುತ್ತಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕಿಡಿಕಾರಿದ್ದಾರೆ.

ಪಶ್ಚಿಮ ಬಂಗಾಳದ ಗಡಿಯಲ್ಲಿ ನಿರ್ಮಿಸಿರುವ ಪ್ರಯಾಣಿಕರ ನೂತನ ಟರ್ಮಿನಲ್‌ ಅನ್ನು ಉದ್ಘಾಟಿಸಿ ಮಾತನಾಡಿದ ಅಮಿತ್ ಶಾ, ‘ಪಶ್ಚಿಮ ಬಂಗಾಳದಲ್ಲಿ ಶಾಂತಿ ನೆಲಸಲು ಗಡಿಗಳಲ್ಲಿ ನುಸುಳುವಿಕೆ ಮೇಲೆ ನಿಯಂತ್ರಣ ಸಾಧಿಸುವುದು ಅತ್ಯಗತ್ಯವಾಗಿದೆ. 2026ರಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಅಕ್ರಮ ವಲಸೆಯನ್ನು ತಡೆಯಲಾಗುವುದು ಎಂದು ತಿಳಿಸಿದರು.

ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅಮಿತ್‌ ಶಾ, ‘ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ದೇಶದಲ್ಲಿ ಶಾಂತಿ ನೆಲೆಸಲು ಭೂಬಂದರುಗಳು ಪ್ರಮುಖ ಪಾತ್ರವಹಿಸುತ್ತದೆ. ಬಾಂಗ್ಲಾದೇಶ ಮತ್ತು ಭಾರತದ ಸಂಬಂಧ ಉತ್ತಮವಾಗಿರಲು ಗಡಿಗಳಲ್ಲಿ ನುಸುಳುವಿಕೆಯ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು.ಉಭಯ ರಾಷ್ಟ್ರಗಳ ವ್ಯಾಪಾರ ಸಂಬಂಧಗಳನ್ನು ಹೆಚ್ಚಿಸುವ ಹಾಗೂ ಬಲಪಡಿಸುವಲ್ಲಿ ಭೂಬಂದರುಗಳು ಪ್ರಮುಖ ಪಾತ್ರವಹಿಸುತ್ತದೆ. ಪೆಟ್ರಾಪೋಲ್‌ ದಕ್ಷಿಣ ಏಷ್ಯಾದ ಅತಿ ದೊಡ್ಡ ಭೂ ಬಂದರು ಆಗಿದೆ. ಭಾರತ ಹಾಗೂ ಬಾಂಗ್ಲಾದೇಶ ನಡುವಿನ ವಾಣಿಜ್ಯ ಹಾಗೂ ವಹಿವಾಟಿನ ಪ್ರಮುಖ ಭೂಮಾರ್ಗವಾಗಿದೆ. ಪೆಟ್ರಾಪೋಲ್‌ (ಭಾರತ) ಹಾಗೂ ಬೆನಾಪೋಲ್‌(ಬಾಂಗ್ಲಾದೇಶ) ನಡುವೆ ಮುಖ್ಯವಾದ ಭೂಗಡಿಯಾಗಿದೆ ಎಂದರು.

ಆರ್.ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ನಡೆದ ಅತ್ಯಾಚಾರ ಪ್ರಕರಣದ ಕುರಿತು ಮಾತನಾಡಿ, ಸಂದೇಶ್‌ಖಲಿ ಮತ್ತು ಆರ್‌ಜಿ.ಕರ್ ಅತ್ಯಾಚಾರ ಪ್ರಕರಣಗಳನ್ನು ನೋಡಿದ ಮೇಲೆ ಬಂಗಾಳದಲ್ಲಿ ನಮ್ಮ ತಾಯಂದಿರು ಮತ್ತು ಸಹೋದರಿಯರು ಸುರಕ್ಷಿತವಾಗಿರಲು ಸಾಧ್ಯವಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!